Top News

    ಗದಗ ಜಿಲ್ಲಾ ಸಹಕಾರ ಸಂಘಗಳ ವತಿಯಿಂದ ಸಹಕಾರದಿಂದ ಸ್ವಚ್ಛತಾ ಅಭಿಯಾನ

    June 6, 2025

    ನಿರೀಕ್ಷೆಗೂ ಮೀರಿ ರೆಪೋ ದರ ಕಡಿತಗೊಳಿಸಿದ ಆರ್‌ಬಿಐ

    June 6, 2025

    ಜೂನ್‌ 8ರಂದು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಕ್ಷಯ ಸೌಧ ಕಟ್ಟಡ ಉದ್ಘಾಟನೆ

    June 5, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಉಡುಪಿ ಕಥೋಲಿಕ್‌ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸದಸ್ಯರಿಗೆ 17% ಡಿವಿಡೆಂಡ್
    News

    ಉಡುಪಿ ಕಥೋಲಿಕ್‌ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸದಸ್ಯರಿಗೆ 17% ಡಿವಿಡೆಂಡ್

    adminBy adminSeptember 18, 2024

    84.05 ಲಕ್ಷ ರೂ. ಲಾಭ, ಸತತ ಎರಡನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಸಾಧನಾ ಪುರಸ್ಕಾರ

    ಉಡುಪಿ: ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 27ನೇ ವಾರ್ಷಿಕ ಮಹಾಸಭೆ ಸೋಮವಾರ ಉಡುಪಿ ಶೋಕಮಾತಾ ಚರ್ಚ್‌ನಲ್ಲಿ ಸಂಘದ ಅಧ್ಯಕ್ಷ ಲೂವಿಸ್ ಲೋಬೊ ಅವರ ಅಧ್ಯಕ್ಷತೆಯಲ್ಲಿ ಜರಗಿತು.

    https://chat.whatsapp.com/Ge11n7QCiMj5QyPvCc0H19


    ಸಂಘದ ಮುಖ್ಯ ಕಾರ್ಯನಿರ್ವಾಹಕ ಸಂದೀಪ್ ಎ.ಫೆರ್ನಾಂಡಿಸ್ ವಾರ್ಷಿಕ ವರದಿ ಮಂಡಿಸಿದರು. ಸಂಘವು 2023-24ನೇ ಸಾಲಿನಲ್ಲಿ ರೂ. 84.05 ಲಕ್ಷ ಲಾಭ ಗಳಿಸಿದ್ದು, ಸದಸ್ಯರಿಗೆ 17% ಡಿವಿಡೆಂಡ್ ಘೋಷಿಸಲಾಯಿತು. ಲಯನ್ಸ್ ಕ್ಲಬ್ ಉಡುಪಿ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂಘದ ಅಧ್ಯಕ್ಷರೂ ಆದ ಲೂವಿಸ್ ಲೋಬೊ ಅವರನ್ನು ಸನ್ಮಾನಿಸಲಾಯಿತು.

    ಎಸ್.ಎಸ್.ಎಲ್.ಸಿ ಯಲ್ಲಿ ಶೇಕಡಾ 85ಕ್ಕಿಂತ ಹೆಚ್ಚಿನ ಅಂಕವನ್ನು ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ಹಾಗೂ ಅಶಕ್ತರೂ/ಅನಾರೋಗ್ಯ ಪೀಡಿತ 7 ಮಂದಿಗೆ ಮತ್ತು ಮಾನಸ ಪುನರ್ವಸತಿ ಮತ್ತು ನಿರ್ಮಿತಿ ಕೇಂದ್ರ,ಪಾಂಬೂರು ಇವರಿಗೆ ಆರ್ಥಿಕ ಸಹಾಯ ನೀಡಲಾಯಿತು. ಸಂಘವು ಸತತ 2ನೇ ಬಾರಿ ಪ್ರತಿಷ್ಠಿತ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇವರಿಂದ ಗುರುತಿಸಲ್ಪಟ್ಟು ಸ್ವೀಕರಿಸಿದ “ಸಾಧನಾ ಪ್ರಶಸ್ತಿ”ಯನ್ನು ಉಡುಪಿ ಶೋಕಮಾತಾ ಇಗರ್ಜಿಯ ಪಾಲನಾ ಮಂಡಳಿಯ ಉಪಾಧ್ಯಕ್ಷ ರಾಬರ್ಟ್ ಮ್ಯಾಕ್ಸಿಂ ಡಿಸೋಜ ಸಭೆಯಲ್ಲಿ ಆಡಳಿತ ಮಂಡಳಿಗೆ ಹಸ್ತಾಂತರಿಸಿದರು. ಸಂಘದ ಉಪಾಧ್ಯಕ್ಷ ಜೇಮ್ಸ್ ಡಿಸೋಜ ವಂದಿಸಿದರು.


    ಸಂಘದ ನಿರ್ದೇಶಕರಾದ ಅಲೋಶಿಯಸ್ ಡಿ ಅಲ್ನೋಡಾ, ಫೆಲಿಕ್ಸ್ ಪಿಂಟೋ, ಇಗ್ನೇಶಿಯಸ್ ಮೋನಿಸ್, ಫ್ರಾಂಕ್ಲಿನ್ ಮಿನೇಜಸ್, ಪರ್ಸಿ ಡಿಸೋಜ, ಆರ್ಚಿಬಾಲ್ಡ್ ಡಿಸೋಜ, ಕೆವಿನ್ ಪಿರೇರಾ, ಜೆಸಿಂತಾ ಡಿಸೋಜ, ಗಿಲ್ಬರ್ಟ್ ಫೆರ್ನಾಂಡಸ್, ನೇರಿ ಕರ್ನಲಿಯೋ, ಲೋಯ್ಲೆಟ್ ಕರ್ನೇಲಿಯೋ, ಶಾಖಾ ವ್ಯವಸ್ಥಾಪಕರಾದ ನೈನಾ ಮಿನೇಜಸ್, ಸುನಿಲ್ ಡಿಸೋಜ, ಜೆನೆಟ್ ಡಿಸೋಜ, ಶೀತಲ್ ಮರಿಯಾ ಡಿಸೋಜ, ಜೋಯ್ಸನ್ ಡಿಸೋಜ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಮೈಕಲ್ ಡಿಸೋಜ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು. ಸಂಘವು ಉಡುಪಿ ಯ ಕ್ರಿಸ್ತಜ್ಯೋತಿ ಕಾಂಪ್ಲೆಕ್ಸ್ ನಲ್ಲಿ ಆಡಳಿತ ಕಛೇರಿ ಮತ್ತು ಮುಖ್ಯ ಶಾಖೆಯೊಂದಿಗೆ, ಮಲ್ಪೆ, ಉದ್ಯಾವರ, ಶಿರ್ವ ಮತ್ತು ಹೂಡೆ-ಕೆಮ್ಮಣ್ಣುವಿನಲ್ಲಿ ಶಾಖೆಗಳನ್ನು ಹೊಂದಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Department Lewis Lobo Sahakara Spandana Spandana Udupi CatholicCredit Cooperative Society
    Previous Articleಮೂಡುಬಿದಿರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಸದಸ್ಯರಿಗೆ ಶೇ.12 ಡಿವಿಡೆಂಡ್‌
    Next Article ಪ್ರಣವ ಸೌಹಾರ್ದ ಸಹಕಾರಿಗೆ ಸ್ವಂತ ಪ್ರಧಾನ ಕಚೇರಿಯ ಆಶಯ ಶೀಘ್ರ ಸಾಕಾರ

    Related Posts

    News

    ಗದಗ ಜಿಲ್ಲಾ ಸಹಕಾರ ಸಂಘಗಳ ವತಿಯಿಂದ ಸಹಕಾರದಿಂದ ಸ್ವಚ್ಛತಾ ಅಭಿಯಾನ

    June 6, 2025
    News

    ನಿರೀಕ್ಷೆಗೂ ಮೀರಿ ರೆಪೋ ದರ ಕಡಿತಗೊಳಿಸಿದ ಆರ್‌ಬಿಐ

    June 6, 2025
    News

    ಜೂನ್‌ 8ರಂದು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಕ್ಷಯ ಸೌಧ ಕಟ್ಟಡ ಉದ್ಘಾಟನೆ

    June 5, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಗದಗ ಜಿಲ್ಲಾ ಸಹಕಾರ ಸಂಘಗಳ ವತಿಯಿಂದ ಸಹಕಾರದಿಂದ ಸ್ವಚ್ಛತಾ ಅಭಿಯಾನ

    June 6, 2025

    ನಿರೀಕ್ಷೆಗೂ ಮೀರಿ ರೆಪೋ ದರ ಕಡಿತಗೊಳಿಸಿದ ಆರ್‌ಬಿಐ

    June 6, 2025

    ಜೂನ್‌ 8ರಂದು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಕ್ಷಯ ಸೌಧ ಕಟ್ಟಡ ಉದ್ಘಾಟನೆ

    June 5, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.