Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಜಗದೀಶ್ಚಂದ್ರ ಅಂಚನ್, ಉಪಾಧ್ಯಕ್ಷರಾಗಿ ರಾಘವ ಆರ್.ಉಚ್ಚಿಲ್ ಅವಿರೋಧ ಆಯ್ಕೆ
    Mahasabhe

    ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಜಗದೀಶ್ಚಂದ್ರ ಅಂಚನ್, ಉಪಾಧ್ಯಕ್ಷರಾಗಿ ರಾಘವ ಆರ್.ಉಚ್ಚಿಲ್ ಅವಿರೋಧ ಆಯ್ಕೆ

    adminBy adminJanuary 27, 2025

    ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್‌ಸಿಡಿಸಿಸಿ ಬ್ಯಾಂಕಿನ ಬ್ಯಾಂಕ್ ನಿರೀಕ್ಷಕ ಎಸ್. ಜಗದೀಶ್ಚಂದ್ರ ಅಂಚನ್, ಉಪಾಧ್ಯಕ್ಷರಾಗಿ ಶ್ರೀ ಭಗವತಿ ಸಹಕಾರ ಬ್ಯಾಂಕಿನ ವ್ಯವಸ್ಥಾಪಕ ರಾಘವ ಆರ್.ಉಚ್ಚಿಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರಕುಮಾರ್ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಕಚೇರಿಯಲ್ಲಿ ಶನಿವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಎಸ್. ಜಗದೀಶ್ಚಂದ್ರ ಅಂಚನ್ ಅಧ್ಯಕ್ಷರಾಗಿ ಎರಡನೇ ಅವಧಿಗೆ ಪುನರಾಯ್ಕೆಯಾದರು. ರಾಘವ ಆರ್. ಉಚ್ಚಿಲ್ ಮೊದಲ ಬಾರಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ದಕ್ಷಿಣ ಕನ್ನಡ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಎಂ. ಚುನಾವಣಾ ಪ್ರಕ್ರಿಯೆ ನಡೆಸಿದರು.
    ಜಗದೀಶ್ಚಂದ್ರ ಅಂಚನ್ 20 ವರ್ಷಗಳಿಂದ ಸಂಘದ ನಿರ್ದೇಶಕರಾಗಿ, 2007ರಲ್ಲಿ ಉಪಾಧ್ಯಕ್ಷರಾಗಿ, 2020-25ನೇ ಸಾಲಿನಲ್ಲಿ ಅಧ್ಯಕ್ಷರಾಗಿ, ಇದೀಗ ಮುಂದಿನ ಅವಧಿಗೂ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ರಾಘವ ಆರ್.ಉಚ್ಚಿಲ್ ಹತ್ತು ವರ್ಷಗಳಿಂದ ನಿರ್ದೇಶಕರಾಗಿದ್ದು, ಈ ಬಾರಿ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಚುನಾವಣಾ ಪ್ರಕ್ರಿಯೆ ವೇಳೆ ನೂತನ ಆಡಳಿತ ಮಂಡಳಿಯ ನಿರ್ದೇಶಕರಾದ ದಿವಾಕರ ಶೆಟ್ಟಿ ಕೆ. ಕಾರ್ಕಳ, ವಿಶ್ವೇಶ್ವರ ಐತಾಳ್ ಎಸ್. ಕುಂದಾಪುರ, ಜಯಪ್ರಕಾಶ್ ರೈ ಸಿ. ಪುತ್ತೂರು, ವಿಶ್ವನಾಥ್ ಕೆ.ಟಿ. ಸುಳ್ಯ, ವಿಶ್ವನಾಥ್ ಎನ್. ಅಮೀನ್ ಉಡುಪಿ, ಶಿವಾನಂದ ಪಿ. ಬಂಟ್ವಾಳ, ಗಿರಿಧರ್ ಕೆ. ಬೆಳ್ತಂಗಡಿ, ಚಂದ್ರಕಲಾ ಕೆ. ಮಂಗಳೂರು, ಗೀತಾಕ್ಷಿ ಮಂಗಳೂರು, ಕಿರಣ್ ಕುಮಾರ್ ಶೆಟ್ಟಿ ಮಂಗಳೂರು, ನಿಶಿತಾ ಜಯರಾಮ್ ಮಂಗಳೂರು, ಮೋಹನ್ ಎಸ್. ಮಂಗಳೂರು, ಪ್ರೇಮರಾಜ್ ಭಂಡಾರಿ ಮಂಗಳೂರು ಹಾಗೂ ಸಂಘದ ಮುಖ್ಯಕಾರ್ಯನಿರ್ಹಣಾಧಿಕಾರಿ ಸತೀಶ್ ಪೂಜಾರಿ ಉಪಸ್ಥಿತರಿದ್ದರು.

    Dakshina Kannada Sahakari Noukarara Sangha Elcetion Process Raghava R Ucchil S Jagadeehschandra Anchan Sooterpete
    Previous Articleಶ್ರೀ ಗೋಕರ್ಣನಾಥ ಕೋ ಆಪರೇಟಿವ್‌ ಬ್ಯಾಂಕ್‌ ಅಧ್ಯಕ್ಷರಾಗಿ ಚಂದ್ರಶೇಖರ್‌ ಕುಮಾರ್‌ ಆಯ್ಕೆ
    Next Article ವಿಶ್ವಕರ್ಮ ಸಹಕಾರ ಬ್ಯಾಂಕ್‌ ಅಧ್ಯಕ್ಷರಾಗಿ ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯ ಪುನರಾಯ್ಕೆ

    Related Posts

    ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಹವಾನಿಯಂತ್ರಿತ ಸಭಾಭವನ ಉದ್ಘಾಟನೆ

    June 28, 2026

    ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಅಜ್ಜಿನಡ್ಕ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

    June 11, 2026

    ಮಾರ್ಚ್‌ 1ರಂದು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಅಭಿನಂದನಾ ಕಾರ್ಯಕ್ರಮ

    February 7, 2025
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.