Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿ 6.09 ಕೋಟಿ ರೂ. ಲಾಭ
    News

    ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿ 6.09 ಕೋಟಿ ರೂ. ಲಾಭ

    adminBy adminApril 12, 2025

    ಮಂಗಳೂರು: ವಜ್ರಮಹೋತ್ಸವ ಸಂಭ್ರಮಾಚರಣೆಯಲ್ಲಿರುವ ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿ 2024-25ನೇ ಸಾಲಿನಲ್ಲಿ 1292.45 ಕೋಟಿ ರೂ. ವ್ಯವಹಾರ ನಡೆಸಿ 6.09 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ತಿಳಿಸಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    1964ರಲ್ಲಿ ದೇವಮಾನವ ದಿ|ಪಾಲ್ಕೆ ಬಾಬುರಾಯ ಆಚಾರ್ಯರ ಮುಂದಾಳತ್ವದಲ್ಲಿ ಸ್ಥಾಪನೆಗೊಂಡ ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಯು ಒಟ್ಟು 22848 ಸದಸ್ಯ ರಿಂದ 7.03 ಕೋಟಿ ರೂ ಪಾಲು ಬಂಡವಾಳ ಹೊಂದಿದೆ. ಒಟ್ಟು ಠೇವಣಿ 253.86 ಕೋಟಿ ರೂ. ಇದ್ದು, ಸದಸ್ಯ/ಗ್ರಾಹಕರಿಗೆ ಚಿನ್ನಾಭರಣ ಸಾಲ, ಜಾಮೀನು ಸಾಲ, ವಾಹನ ಖರೀದಿ ಸಾಲ, ಆಸ್ತಿ ಅಡವು / ಗೃಹ ನಿರ್ಮಾಣ ಸಾಲ, ಯಂತ್ರೋಪಕರಣ ಸಾಲ, ಸದಸ್ಯರ ಮಕ್ಕಳ ವಿದ್ಯಾಭ್ಯಾಸಕ್ಕೆ ಸಾಲ ಹಾಗೂ ನಿಬಡ್ಡಿಯಲ್ಲಿ ಸೋಲಾರ್ ಯಂತ್ರೋಪಕರಣ ಸಾಲ ನೀಡುತ್ತಿದ್ದು ವರ್ಷಾಂತ್ಯಕ್ಕೆ ರೂ.240.32 ಕೋಟಿ ಹೊರಬಾಕಿ ಸಾಲ ಇದ್ದು ಡಿಮ್ಯಾಂಡ್ ಮೇಲೆ ಸುಸ್ತಿ ಬಾಕಿ ಪ್ರಮಾಣ ಶೇ.2.76 ಆಗಿರುತ್ತದೆ. ಕಳೆದ ಸಾಲಿನಲ್ಲಿ ಸುಸ್ತಿ ಬಾಕಿ ಶೇ.3.77 ಇದ್ದು ಶೇ.1.01 ಕಡಿಮೆಯಾಗಿರುತ್ತದೆ. ಸಂಸ್ಥೆಯು 26.22 ಕೋಟಿ ನಿಧಿ, 288.03 ಕೋಟಿ ರೂ. ದುಡಿಯುವ ಬಂಡವಾಳದೊಂದಿಗೆ 51.49 ಕೋಟಿ ರೂ. ಧನವಿನಿಯೋಗಗಳನ್ನು ಹೊಂದಿರುತ್ತದೆ. 01 ಕೈಗಾರಿಕಾ ಶಾಖೆ ಹೊಂದಿದ್ದು 17 ಬ್ಯಾಂಕಿಂಗ್ ಶಾಖೆಗಳನ್ನು ಹೊಂದಿದೆ. ಆಡಳಿತ ಕಛೇರಿ ಸಹಿತ ಆರು ಶಾಖೆಗಳು ಸ್ವಂತ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿವೆ.


    ವಜ್ರ ಮಹೋತ್ಸವದ ಪ್ರಯುಕ್ತ 60 ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು 51 ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಪೂರೈಸಲಾಗಿದೆ. ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪುರಸ್ಕಾರ, ವೈದ್ಯಕೀಯ ಶಿಬಿರ, ವನಮಹೋತ್ಸವ, ಸದಸ್ಯರಿಗೆ ಕ್ರೀಡಾಕೂಟ, ಸಾರ್ವಜನಿಕರ ಉಪಯೋಗಕ್ಕೆ ಪ್ಯೂರಿಫೈಡ್ ಕುಡಿಯುವ ನೀರಿನ ವ್ಯವಸ್ಥೆ, ಅನುದಾನಿತ ಶಾಲೆಗಳಿಗೆ ಅಗತ್ಯ ವಸ್ತುಗಳ ಪೂರೈಕೆ, ನಿರಾಶ್ರಿತರಿಗೆ ಮತ್ತು ಹಿರಿಯರ ಮನೆ ಅರೈಕೆ ಮಾಡುವ ಸಂಸ್ಥೆಗಳಿಗೆ ಆರ್ಥಿಕ ಸಹಕಾರ ಸೌಲಭ್ಯ, ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ತೀರಾ ಬಡ ಕುಟುಂಬಕ್ಕೆ ಮನೆ ಹಸ್ತಾಂತರ ಮುಂತಾದ ಕಾರ್ಯಕ್ರಮಗಳು ನಡೆದಿವೆ.
    ಪ್ರಸ್ತುತ ಆಡಳಿತ ಕಛೇರಿ ಹಾಗೂ ಕೊಟ್ಟಾರ ಚೌಕಿ ಶಾಖೆಯ ನವೀಕರಣ ಕಾರ್ಯ ಪ್ರಗತಿಯಲ್ಲಿದೆ. ಸಂಸ್ಥೆಯ ಪ್ರಗತಿಗೆ ಪೂರಕವೆಂಬಂತೆ ಎರಡು ಬಾರಿ ರಾಜ್ಯದ ಉತ್ತಮ ಸಹಕಾರ ಸಂಘ ಪ್ರಶಸ್ತಿ, ಎರಡು ಬಾರಿ ಜಿಲ್ಲೆಯ ಉತ್ತಮ ಸಹಕಾರಿ ಸಂಘ ಪ್ರಶಸ್ತಿ, ಎರಡು ಬಾರಿ ರಾಜ್ಯದ ಉತ್ತಮ ಸಹಕಾರಿ ಸಂಘ ಪ್ರಶಸ್ತಿ, ಏಳು ಬಾರಿ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ “ಸಾಧನಾ ಪ್ರಶಸ್ತಿ”, 2023 -2024ರಲ್ಲಿ ಎರಡು ಬಾರಿ ಸಹಕಾರಿ ಸಪ್ತಾಹದ ಮೂಲಕ ಜಿಲ್ಲಾ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಪಡೆದ ಹೆಗ್ಗಳಿಗೆ ನಮ್ಮ ಸಂಸ್ಥೆಯದಾಗಿರುತ್ತದೆ ಎಂದು ಪಿ.ಉಪೇಂದ್ರ ಆಚಾರ್ಯ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Cooperative Registrar SK Goldsmiths Industrial Co Operative Society SKGI Upendra Acharya
    Previous Articleಕ್ಯಾಂಪ್ಕೊ ಪುತ್ತೂರು ಶಾಖೆಯಲ್ಲಿ ಮಣ್ಣಿನ ಪರೀಕ್ಷಾ ಯಂತ್ರಕ್ಕೆ ಚಾಲನೆ
    Next Article ಲಡಾಖ್, ಲಕ್ಷದ್ವೀಪಕ್ಕೆ ಮೊದಲ ಅಪೆಕ್ಸ್ ಸ್ಟೇಟ್ ಕೋ-ಆಪರೇಟಿವ್‌ ಬ್ಯಾಂಕ್‌

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.