Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಖ್ಯಾತ ವಿಧಿವಿಜ್ಞಾನ ತಜ್ಞ ಡಾ.ಜೆ.ಎಂ.ವ್ಯಾಸ್ ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕ
    News

    ಖ್ಯಾತ ವಿಧಿವಿಜ್ಞಾನ ತಜ್ಞ ಡಾ.ಜೆ.ಎಂ.ವ್ಯಾಸ್ ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕ

    adminBy adminApril 17, 2025

    ನವದೆಹಲಿ: ಪ್ರಸಿದ್ಧ ವಿಧಿವಿಜ್ಞಾನ ತಜ್ಞ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಡಾ.ಜೆ.ಎಂ. ವ್ಯಾಸ್ (ಜಯಂತ್‌ಕುಮಾರ್ ಮಗನ್‌ಲಾಲ್ ವ್ಯಾಸ್ ) ಅವರನ್ನು ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಿಸಲಾಗಿದೆ.

    https://chat.whatsapp.com/EbVKVnWB6rlHT1mWtsgbch
    ಗೃಹ ಸಚಿವಾಲಯದ ಅಧೀನದ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದ (ಎನ್‌ಎಫ್‌ಎಸ್‌ಯು) ಸ್ಥಾಪಕ ಉಪಕುಲಪತಿಯಾಗಿರುವ ಡಾ.ಜೆ.ಎಂ.ವ್ಯಾಸ್ ಈ ಹೊಸ ಹುದ್ದೆ ವಹಿಸಿಕೊಳ್ಳುವ ಮೂಲಕ ತಮ್ಮ ವೃತ್ತಿ ಜೀವನದಲ್ಲಿ ಮತ್ತೊಂದು ಹೊಸ ಮಜಲು ಏರಿದ್ದಾರೆ. ಭಾರತದಲ್ಲಿ ವಿಧಿವಿಜ್ಞಾನ ಮತ್ತು ಶಿಕ್ಷಣದ ಪ್ರವರ್ತಕರೂ ಆಗಿರುವ ಜಯಂತ್‌ಕುಮಾರ್ ಮಗನ್‌ಲಾಲ್ ವ್ಯಾಸ್ ಗುಜರಾತ್‌ ರಾಜ್ಯದ ಗಾಂಧಿನಗರದ ಎನ್‌ಎಫ್‌ಎಸ್‌ಯುನ ಉಪಕುಲಪತಿಯಾಗಿ ಸೇವೆ ಸಲ್ಲಿಸಿದ್ದಾರೆ. 1993ರಿಂದ 2009ರ ತನಕ ನಿವೃತ್ತರಾಗುವವರೆಗೆ ಗುಜರಾತ್ ರಾಜ್ಯದ ವಿಧಿವಿಜ್ಞಾನ ನಿರ್ದೇಶನಾಲಯದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದ ಅವರು ಮೂರು ದಶಕಗಳ ಕಾಲ ಈ ಕ್ಷೇತ್ರಕ್ಕೆ ಅಪಾರ ಕೊಡುಗೆ ಸಲ್ಲಿಸಿದ್ದರು. ಡಾ.ವ್ಯಾಸ್ ಅವರು 2009 ರಲ್ಲಿ ಪ್ರಾರಂಭವಾದಾಗಿನಿಂದ 2020ರಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಎಂದು ಮರುನಾಮಕರಣಗೊಳ್ಳುವವರೆಗೆ ಗುಜರಾತ್ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಮಹಾನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ನಂತರ ಉಪಕುಲಪತಿಯಾಗಿ ನೇತೃತ್ವ ವಹಿಸಿದ್ದರು.


    ತಮ್ಮ ಸೇವಾವಧಿಯಲ್ಲಿ ಡಾ.ವ್ಯಾಸ್ ಅವರು ಹಲವಾರು ಪ್ರತಿಷ್ಠಿತ ಗೌರವಗಳನ್ನೂ ಪಡೆದಿದ್ದಾರೆ. ಅವರಿಗೆ 1997ರಲ್ಲಿ ರಾಷ್ಟ್ರಪತಿ ಪದಕ ಮತ್ತು 2004ರಲ್ಲಿ 15 ನೇ ಅಖಿಲ ಭಾರತ ವಿಧಿವಿಜ್ಞಾನ ವಿಜ್ಞಾನ ಸಮ್ಮೇಳನದಲ್ಲಿ ಅತ್ಯುತ್ತಮ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ ನಿರ್ದೇಶಕರಾಗಿ ಪ್ರಶಂಸಾ ಪ್ರಮಾಣಪತ್ರ ಲಭಿಸಿತ್ತು. 2008ರಲ್ಲಿ ಅಮಿಟಿ ವಿಶ್ವವಿದ್ಯಾಲಯ ಮತ್ತು ನವದೆಹಲಿಯ ಏಮ್ಸ್ನಿಂದ ವಿಧಿವಿಜ್ಞಾನ ರಸಾಯನಶಾಸ್ತ್ರದಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪಡೆದಿದ್ದರು. ವಿಧಿವಿಜ್ಞಾನ ಮತ್ತು ಇಂಜಿನಿಯರಿಂಗ್‌ ಕ್ಷೇತ್ರಕ್ಕೆ ನೀಡಿದ ಮಹತ್ವದ ಕೊಡುಗೆಗಳನ್ನು ಗುರುತಿಸಿ, 2022ರಲ್ಲಿ ಭಾರತ ಸರ್ಕಾರವು ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.
    ಡಾ.ವ್ಯಾಸ್‌ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಹಲವಾರು ಕಾರ್ಯತಂತ್ರಗಳನ್ನು ರೂಪಿಸಲಾಗಿದ್ದು, ಇದರಲ್ಲಿ ಜಿಸಿಟಿಸಿ ಮತ್ತು ಥಿಂಕ್‌ಟ್ಯಾಂಕ್, ಪೆನಿನ್ಸುಲಾ ಫೌಂಡೇಶನ್ ಮತ್ತು ಅದಾನಿ ಗ್ರೂಪ್‌ನೊಂದಿಗೆ ಮಾರ್ಚ್ 2, 2022ರಂದು ಸಹಿ ಹಾಕಲಾದ ಒಪ್ಪಂದಗಳೂ ಸೇರಿವೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Dr. J.M. Vyas IRMA Jayantkumar Maganlal Vyas National Forensic Sciences University NFSU Tribhuvan Sahakari University Vice Chancellor of Tribhuvan Sahkari University
    Previous Articleಎಂಸಿಸಿ ಬ್ಯಾಂಕ್‌ ವಿತ್ತೀಯ ವರ್ಷದಲ್ಲಿ 13 ಕೋಟಿ ರೂ. ಲಾಭ
    Next Article ಮಂಗಳೂರು ಸೌಹಾರ್ದ ಸಹಕಾರಿಯಿಂದ ಉಚಿತ ಕನ್ನಡಕ ವಿತರಣೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.