ಸ್ವಾತಂತ್ರ್ಯ ಹೋರಾಟಗಾರ, ಸಮಾಜರತ್ನ ದಿ.ಡಾ.ಅಮ್ಮೆಂಬಳ ಬಾಳಪ್ಪರವರ ನೇತೃತ್ವ ಹಾಗೂ ಸಹಕಾರಿ ಧುರೀಣ ಬಿ.ಹೂವಯ್ಯ ಮೂಲ್ಯರವರ ಸಾರಥ್ಯದಲ್ಲಿ ಆರಂಭವಾದ ಬಂಟ್ವಾಳದಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಮಾಜ ಸೇವಾ ಸಹಕಾರಿ ಸಂಘವು ಪ್ರಸಕ್ತ 5.05 ಕೋಟಿ ರೂ.(ತಾತ್ಕಾಲಿಕ) ಲಾಭ ಗಳಿಸಿದೆ.
https://chat.whatsapp.com/EbVKVnWB6rlHT1mWtsgbch
ಕೇವಲ 131 ಸದಸ್ಯರನ್ನೊಳಗೊಂಡು ರೂ. 22,620 ಪಾಲು ಬಂಡವಾಳದೊಂದಿಗೆ ಸ್ಥಾಪಿಸಲ್ಪಟ್ಟ ಸಮಾಜ ಸೇವಾ ಸಹಕಾರಿ ಸಂಘವು ಪ್ರಸ್ತುತ 16 ಶಾಖೆಗಳನ್ನು ಹೊಂದಿದ್ದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಕಾರ್ಯ ವ್ಯಾಪ್ತಿಯನ್ನು ಹೊಂದಿದೆ. ಸಂಘದ ಪುಂಜಾಲಕಟ್ಟೆ, ಮುಡಿಪು ಮತ್ತು ಉಪ್ಪಿನಂಗಡಿ ಶಾಖೆಯು ಸ್ವಂತ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದೆ. ಸಂಘವು 2024-25ನೇ ಸಾಲಿನಲ್ಲಿ ರೂ.1159 ಕೋಟಿ ವ್ಯವಹಾರ ನಡೆಸಿದೆ.
ಆರ್ಥಿಕ ವರ್ಷ 2024-25ರ ಅಂತ್ಯಕ್ಕೆ ಸಂಘದಲ್ಲಿ 9047 ‘ಎ’ ತರಗತಿ, 5556 ‘ಬಿ’ ತರಗತಿ ಸದಸ್ಯರಿದ್ದು ರೂ.8.09 ಕೋಟಿ ಪಾಲು ಬಂಡವಾಳ ಹೊಂದಿದೆ. 19.78 ಕೋಟಿ ರೂ. ನಿಧಿಗಳು, 55.35 ಕೋಟಿ ರೂ. ವಿನಿಯೋಗಗಳು, 229.47 ಕೋಟಿ ರೂ. ಠೇವಣಾತಿ ಇದ್ದು 215.21 ಕೋಟಿ ರೂ. ಹೊರಬಾಕಿ ಸಾಲಗಳು ಇದೆ. ಸಂಘದ ದುಡಿಯುವ ಬಂಡವಾಳ ರೂ. 259.66 ಕೋಟಿ ಆಗಿದೆ.
ಆಡಿಟ್ ವರ್ಗೀಕರಣದಲ್ಲಿ ಸತತವಾಗಿ ಎ ತರಗತಿ ಹೊಂದಿರುವ ಸಂಘವು ಸದಸ್ಯರ ಅನುಕೂಲಕ್ಕಾಗಿ ಬಂಟ್ವಾಳ ಬೈಪಾಸ್ ಶಾಖೆಯಲ್ಲಿ ಇ-ಸ್ಟ್ಯಾಂಪ್ ಸೌಲಭ್ಯ, ಕೆಲವು ಶಾಖೆಗಳಲ್ಲಿ ಸೇಫ್ ಲಾಕರ್ ಸೌಲಭ್ಯ, ಮಣಿಪಾಲ ಆರೋಗ್ಯ ಕಾರ್ಡ್, ಸದಸ್ಯರ ಮಕ್ಕಳಿಗೆ ಉನ್ನತ ವ್ಯಾಸಂಗಕ್ಕಾಗಿ ವಿದ್ಯಾರ್ಥಿವೇತನ, ಯಶಸ್ವಿನಿ ಆರೋಗ್ಯ ರಕ್ಷಣಾ ಸೌಲಭ್ಯ, ಸದಸ್ಯರ ಗಂಭೀರ ಕಾಯಿಲೆಗೆ ಆರ್ಥಿಕ ಸಹಾಯಧನ ಹೀಗೆ ಹಲವಾರು ಸೌಲಭ್ಯಗಳನ್ನು ಸದಸ್ಯರಿಗೆ ನೀಡುತ್ತ ಬಂದಿದೆ. ಸರ್ವತೋಮುಖ ಪ್ರಗತಿ ಸಾಧಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಿಂದ ಸಾಧನಾ ಪ್ರಶಸ್ತಿ ಪಡೆದುಕೊಂಡಿದೆ. 2025-26ನೇ ಸಾಲಿನಲ್ಲಿ ನಮ್ಮ ಸಂಘದ ವ್ಯವಹಾರವನ್ನು ವಿಸ್ತರಿಸುವ ಸಲುವಾಗಿ ಹಾಗೂ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಆಶಯದೊಂದಿಗೆ ಹೊಸ ಶಾಖೆ ತೆರೆಯುವ ಇರಾದೆ ಆಡಳಿತ ಮಂಡಳಿಯ ಮುಂದಿದೆ. ಮೆಲ್ಕಾರ್ ಶಾಖೆಗೆ ಸ್ವಂತ ಕಟ್ಟಡವನ್ನು ಖರಿದಿಸುವ ಪ್ರಸ್ತಾವನೆ ಕೂಡ ಆಡಳಿತ ಮಂಡಳಿಯ ಮುಂದಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com