Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ವಿಶ್ವಕರ್ಮ ಸಹಕಾರ ಬ್ಯಾಂಕ್‌ 49ನೇ ಸಂಸ್ಥಾಪನಾ ದಿನಾಚರಣೆ, ಸ್ವರ್ಣ ಜಯಂತಿ ವರ್ಷದ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ
    News

    ನಾಳೆ ವಿಶ್ವಕರ್ಮ ಸಹಕಾರ ಬ್ಯಾಂಕ್‌ 49ನೇ ಸಂಸ್ಥಾಪನಾ ದಿನಾಚರಣೆ, ಸ್ವರ್ಣ ಜಯಂತಿ ವರ್ಷದ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ

    adminBy adminMay 9, 2025

    ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್‌ನ 49ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಸ್ವರ್ಣ ಜಯಂತಿ ವರ್ಷದ “ಸ್ವರ್ಣ ಸಂಭ್ರಮ” ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವು ಮಂಗಳೂರಿನ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ಮೇ 11ರಂದು ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್‌. ರಾಜೇಂದ್ರಕುಮಾರ್ ಇವರ ಅಧ್ಯಕ್ಷತೆಯಲ್ಲಿ ಜರುಗುವ ಸಮಾರಂಭದ ಉದ್ಘಾಟನೆಯನ್ನು ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಮಾಡಲಿದ್ದಾರೆ ಎಂದು ಬ್ಯಾಂಕಿನ ಅಧ್ಯಕ್ಷ ಡಾ.ಎಸ್. ಆರ್. ಹರೀಶ್ ಆಚಾರ್ಯ ತಿಳಿಸಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ಶಾಸಕರಾದ ಶ್ರೀ ಡಿ. ವೇದವ್ಯಾಸ ಕಾಮತ್‌, ಕಟಪಾಡಿ ಶ್ರೀಮದ್‌ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನದ ಅಧ್ಯಕ್ಷ ಶ್ರೀಧರ ಆಚಾರ್ಯ ವಡೇರಹೋಬಳಿ, ವಿಶ್ವಕರ್ಮ ಸಹಕಾರ ಬ್ಯಾಂಕ್‌ ಸ್ಥಾಪಕ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಮುನಿಯಾಲು ದಾಮೋದರ ಆಚಾರ್ಯ, ಶ್ರೀ ಲಕ್ಷ್ಮೀ ಜ್ಯುವೆಲ್ಲರ್‌ನ ಮಾಲೀಕರಾದ ಬಿ.ಪ್ರವೀಣ್‌ ಶೇಟ್‌ ನಾಗ್ವೇಕರ್‌, ಮುನಿಯಾಲು ಸಂಜೀವಿನಿ ಫಾರ್ಮ್ಸ್‌ನ ಸವಿತಾ ರಾಮಕೃಷ್ಣ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಬ್ಯಾಂಕಿನ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.‌

    ನಮ್ಮ ಬ್ಯಾಂಕ್ ಖ್ಯಾತಿ
    ಇಂದು “ನಮ್ಮ ಬ್ಯಾಂಕ್‌”ಎಂದು ಗುರುತಿಸಿ ಕರೆಯಲ್ಪಡುವ ವಿಶ್ವಕರ್ಮ ಸಹಕಾರ ಬ್ಯಾಂಕ್‌ 1976ರ ಮೇ 11ರಂದು ದ.ಕ. ಜಿಲ್ಲಾ ಚಿನ್ನದ ಕೆಲಸಗಾರರ ಸಂಘದ ಆಶಯದಂತೆ “ದಿ ಮಂಗಳೂರು ಗೋಲ್ಡ್‌ಸ್ಮಿತ್ಸ್‌ ಕೋ ಆಪರೇಟಿವ್‌ ಸೊಸೈಟಿʼʼ ಎಂಬ ಹೆಸರಿನಲ್ಲಿ ಪ್ರಾರಂಭವಾದ ಸಂಸ್ಥೆ ಆಗಿದೆ. ಶಿಕ್ಷಕರಾಗಿದ್ದ ದಿ. ಬೋಳೂರು ಹರಿಶ್ಚಂದ್ರ ಆಚಾರ್ಯ ಇವರ ದೂರದರ್ಶಿ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ಮಂಗಳೂರು ಪರಿಸರದ ಚಿನ್ನದ ಕೆಲಸಗಾರ ಬಂಧುಗಳನ್ನು ಸಂಘಟಿಸಿ ಅವರ ಶ್ರೇಯೋಭಿವೃದ್ಧಿಗಾಗಿ ಕಟ್ಟಿದ ಆರ್ಥಿಕ ಸಂಸ್ಥೆ ಇದಾಗಿದೆ. ಅಕ್ಟೋಬ‌ರ್ 12, 2000ದಿಂದ ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾನ್ಯತೆಗೆ ಒಳಪಟ್ಟು ‘ವಿಶ್ವಕರ್ಮ ಸಹಕಾರ ಬ್ಯಾಂಕ್’ ಹೆಸರಿನೊಂದಿಗೆ ಒಂದು ಪಟ್ಟಣ ಸಹಕಾರ ಬ್ಯಾಂಕ್ ಆಗಿ ರೂಪಾಂತರಗೊಂಡು ಕಾರ್ಯ ನಿರ್ವಹಿಸಿಕೊಂಡು ಬರುತ್ತಿದೆ. ಮಂಗಳೂರಿನ ರಥಬೀದಿಯಲ್ಲಿ ಪ್ರಧಾನ ಕಚೇರಿ, ಉಡುಪಿ, ಕಾರ್ಕಳ, ಮೆಲ್ಕಾರ್ ಹಾಗೂ ಉಜಿರೆ ಈ ಐದು ಪ್ರದೇಶಗಳಲ್ಲಿ ಶಾಖಾ ಕಚೇರಿಯನ್ನು ಹೊಂದಿ ಚಿನ್ನದ ಕೆಲಸಗಾರರು ಸೇರಿದಂತೆ ಕುಶಲಕರ್ಮಿ ಸದಸ್ಯರ ಆರ್ಥಿಕ ಸಬಲೀಕರಣ ಪ್ರಮುಖ ಕಾರ್ಯವನ್ನು ಮುಂಚೂಣಿಯಲ್ಲಿ ನಿಂತು ಮಾಡಿಕೊಂಡು ಬರುತ್ತಿದೆ. ಬ್ಯಾಂಕಿನ ಸ್ವರ್ಣ ಜಯಂತಿಯ ಈ ಸುಸಂದರ್ಭದಲ್ಲಿ ಸದಸ್ಯರ ಶ್ರೇಯೋಭಿವೃದ್ಧಿ, ಗ್ರಾಹಕರಿಗೆ ಮೌಲ್ಯವರ್ಧಿತ ಸೇವೆಗಳು ಹಾಗೂ ಹಲವಾರು ಸಾಮಾಜಿಕ ರಚನಾತ್ಮಕ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಯೋಜಿಸಿ ಆಚರಿಸುವ ಯೋಜನೆಯನ್ನು ಬ್ಯಾಂಕ್ ಹಾಕಿಕೊಂಡಿದೆ. 

    ಬ್ಯಾಂಕ್‌ನ ಸ್ಥಾಪಕ ಸದಸ್ಯರು:
    ಎಂ.ಗೋಪಾಲ ಆಚಾರ್ಯ, ಐ.ಎನ್.ಸದಾಶಿವ ಆಚಾರ್ಯ, ವಿ.ರಾಮಕೃಷ್ಣ ಆಚಾರ್ಯ, ಬಿ.ಹರಿಶ್ಚಂದ್ರ ಆಚಾರ್ಯ, ಯು.ರಘುವೀರ್, ಬಿ.ಶ್ರೀಧರ ಆಚಾರ್ಯ ಬಿ.ಜಯರಾಮ ಆಚಾರ್ಯ, ಕೆ.ಚಂದ್ರಶೇಖರ ಆಚಾರ್ಯ, ಬಿ.ಸದಾನಂದ ಶೇಟ್, ಮುನಿಯಾಲ್ ದಾಮೋದರ ಆಚಾರ್, ಎಸ್.ನಾಗೇಶ್ ಶೇಟ್, ಪಿ.ಶಿವರಾಮ ಅಚಾರ್ಯ, ನಿಡ್ಡೋಡಿ ಪ್ರಭಾಕರ ಆಚಾರ್ಯ, ಪಯ್ಯಾಲ್ ಭಾಸ್ಕರ ಆಚಾರ್, ಮಿಜಾರ್ ಜಯರಾಮ ಆಚಾರ್ಯ, ಎಂ.ವಿಶ್ವನಾಥ ಆಚಾರ್ಯ, ವಿ.ಚಿನ್ನಯ್ಯ ಆಚಾರ್ಯ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Boloor Harishchandra Acharya Co Operative ministry Cooperative Cooperative Department Cooperative Registrar Dr. S R Harish Acharya Namma bank Shree Vishwakarma Urban Credit Co Operative Society Swarna Jayanthi Vishwakarma Sahakara Bank
    Previous Articleನ ಭೂತೋ ಎಂಬಂತೆ ನಡೆಯಲಿದೆ ನವೋದಯ ಸ್ವ ಸಹಾಯ ಗುಂಪುಗಳ ರಜತ ಸಂಭ್ರಮ ಸಮಾವೇಶ
    Next Article ರಾಷ್ಟ್ರೀಯ ರಕ್ಷಣಾ ನಿಧಿಗೆ ಕ್ಯಾಂಪ್ಕೊ 5 ಕೋಟಿ ರೂ. ದೇಣಿಗೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.