ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ವಿಟ್ಲ ಇದರ ವತಿಯಿಂದ ಬ್ಯಾಂಕಿನ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ ಪುತ್ತೂರಿನ ತೆಂಕಿಲದಲ್ಲಿರುವ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀಯಲ್ಲಿ ಶನಿವಾರದಂದು ಜರಗಿತು.
https://chat.whatsapp.com/EbVKVnWB6rlHT1mWtsgbch
ಸಂಪನ್ಮೂಲ ವ್ಯಕ್ತಿಯಾಗಿ “ಮಾಸ್ಟರ್ ಮೈಂಡ್ ಎಂಟರ್ಪ್ರೈಸಸ್ ಮಂಗಳೂರು” ಇದರ ಮುಖ್ಯಸ್ಥ ಶ್ರೀಶ ಕೆ.ಎಂ ಸಿಬ್ಬಂದಿಗಳಿಗೆ ” People Skill Development Programʼʼ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಹೆಚ್ ಜಗನ್ನಾಥ ಸಾಲಿಯಾನ್, ಉಪಾಧ್ಯಕ್ಷ ಮನೋರಂಜನ್ ಕೆ.ಆರ್, ನಿರ್ದೇಶಕರಾದ ದಯಾನಂದ ಆಳ್ವ ಕೆ., ಮೋಹನ್ ಕೆ.ಎಸ್., ಭಾಸ್ಕರ್ ಶೆಟ್ಟಿ, ದಿವಾಕರ ವಿ., ಸತೀಶ ಪಿ., ಪೂವಪ್ಪ ಎಸ್, ಶುಭಲಕ್ಷ್ಮಿ, ಜಯಂತಿ ಎಚ್.ರಾವ್, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶ್ಯಾಮ್ ಕೆ ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಿದರು. ತರಬೇತಿ ನಂತರ ಶ್ರೀಶ ಕೆ.ಎಂ ಇವರನ್ನು ಬ್ಯಾಂಕಿನ ಅಧ್ಯಕ್ಷ ಜಗನ್ನಾಥ ಸಾಲಿಯಾನ್ ಹಾಗೂ ಪದಾಧಿಕಾರಿಗಳು ಗೌರವಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

