Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರಿ ಕ್ಷೇತ್ರದಿಂದ ಜನೋಪಯೋಗಿ ಸೇವೆ: ಡಾ| ಎಂ.ಎನ್.ರಾಜೇಂದ್ರ ಕುಮಾರ್‌
    News

    ಸಹಕಾರಿ ಕ್ಷೇತ್ರದಿಂದ ಜನೋಪಯೋಗಿ ಸೇವೆ: ಡಾ| ಎಂ.ಎನ್.ರಾಜೇಂದ್ರ ಕುಮಾರ್‌

    adminBy adminJune 18, 2025

    ಕಾರ್ಕಳದ ಕುಂಟಾಡಿಯಲ್ಲಿ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವಿಸ್ತರಣಾ ಕೌಂಟರ್ ಉದ್ಘಾಟನೆ

    ಮಂಗಳೂರು: ಸಹಕಾರಿ ಕ್ಷೇತ್ರವು ಜನರ ಬಳಿ ತೆರಳಿ ಸಮರ್ಪಕ ಸೇವೆ ನೀಡುವುದರಿಂದ, ರಾಷ್ಟ್ರೀಕೃತ ಬ್ಯಾಂಕ್‌ಗಳಿಗಿಂತ ವಿಭಿನ್ನವಾಗಿದೆ. ಗ್ರಾಮಾಂತರ ಪ್ರದೇಶದ ಜನರಿಗೆ ನೆರವಾಗುವ ಉದ್ದೇಶದಿಂದ, ಇದೀಗ ಕುಂಟಾಡಿಯಲ್ಲಿ ವಿಸ್ತರಣಾ ಕೌಂಟರ್ ತೆರೆಯಲಾಗಿದೆ ಎಂದು ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಡಿಸಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

    https://chat.whatsapp.com/EbVKVnWB6rlHT1mWtsgbch
    ಕುಂಟಾಡಿ ಶ್ರೀ ರಕ್ತೇಶ್ವರಿ ದೈವಸ್ಥಾನದಲ್ಲಿ ಭಾನುವಾರ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕಾರ್ಕಳ ಶಾಖೆಯ ವಿಸ್ತರಣಾ ಕೌಂಟರ್ ಉದ್ಘಾಟಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಸಹಕಾರಿ ಸಂಸ್ಥೆಗಳಿಗೂ ಬ್ಯಾಂಕ್ ಎಂಬ ಪದ ಬಳಕೆ ಮಾಡುವಂತೆ ಹಾಗೂ ಸರಕಾರದ ಹಣ ವಿತರಣೆಯಂತಹ ಕಾರ್ಯವನ್ನು ಸಹಕಾರಿ ಸಂಸ್ಥೆಯ ಮೂಲಕ ನಡೆಸುವಂತೆ ಮನವಿ ಮಾಡಿದ್ದು, ಈ ಬಗ್ಗೆ ಕೇಂದ್ರ ಸರಕಾರದ ಜತೆ ಮಾತುಕತೆ ಕೂಡಾ ನಡೆಸಲಾಗುತ್ತಿದೆ ಎಂದು ಹೇಳಿದರು.
    ಕುಂಟಾಡಿ ಶ್ರೀ ರಕ್ತೇಶ್ವರಿ ದೈವಸ್ಥಾನದ ಆಡಳಿತ ಮೊಕ್ತೇಸರ ಕೆ.ಪೃಥ್ವಿರಾಜ್ ಬಿ.ರೈ ತಿರ್ತಬೆಟ್ಟು ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮೂರಿನಲ್ಲಿ ಹುಟ್ಟಿದವರು ಐ.ಎ.ಎಸ್, ಕೆ.ಎ.ಎಸ್ ಹಾಗೂ ನ್ಯಾಯಾಧೀಶರು ಆಗಿರುವುದು ಕುಂಟಾಡಿಯ ಹೆಮ್ಮೆ. ಇದೀಗ ಬ್ಯಾಂಕಿಂಗ್ ವ್ಯವಹಾರಕ್ಕೂ ಪೂರಕ ವ್ಯವಸ್ಥೆ ಕಲ್ಪಿಸಿ ಕೊಡಲಾಗಿದೆ ಎಂದು ಹೇಳಿದರು.


    ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಕೆ.ಜೈರಾಜ್ ಬಿ. ರೈ ಮಾತನಾಡಿ, ೨೦೩೦ರ ಸಾಲಿಗೆ ನಮ್ಮ ಸಹಕಾರಿ ಸಂಸ್ಥೆಯು ೨ ಸಾವಿರ ಕೋಟಿ ರೂ. ವ್ಯವಹಾರ, ೨೦ರಿಂದ ೨೫ ಕೋಟಿ ರೂ. ಲಾಭದ ಜೊತೆಗೆ ೩೧ ಶಾಖೆಯಿಂದ ೪೦ ಶಾಖೆಯನ್ನು ಹೊಂದುವ ಗುರಿ ಇರಿಸಿಕೊಂಡಿದ್ದೇವೆ. ಪ್ರಸ್ತುತ ನನ್ನ ಹುಟ್ಟೂರಿನ ಜನರಿಗೆ ನೆರವಾಗುವ ರೀತಿಯಲ್ಲಿ ಈ ವಿಸ್ತರಣಾ ಕೌಂಟರ್ ತೆರೆಯಲಾಗಿದೆ. ಆರ್ಥಿಕ ಚಟುವಟಿಕೆ ಜತೆಗೆ ಈ ಗ್ರಾಮ ಸರ್ವಾಂಗೀಣ ಅಭಿವೃದ್ಧಿ ಸಾಧಿಸಬೇಕು ಎನ್ನುವುದು ಉದ್ದೇಶ ಎಂದರು.

    ಡಾ|ಎಂ.ಎನ್.ರಾಜೇಂದ್ರಕುಮಾರ್‌ ಗ್ರಾಮಸ್ಥರಿಂದ ಸನ್ಮಾನ

    ಕಾರ್ಕಳದವರೇ ಆದ, ಸಹಕಾರ ರಂಗದ ಅಪೂರ್ವ ಸಾಧಕ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್‌ರವರನ್ನು ಕುಂಟಾಡಿ ಗ್ರಾಮಸ್ಥರು ಹಾಗೂ ಶ್ರೀ ರಕ್ತೇಶ್ವರೀ ದೈವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಅಭಿನಂದನೆ ಸಲ್ಲಿಸಿ ಸನ್ಮಾನಿಸಲಾಯಿತು. ಕುಂಟಾಡಿ ಶ್ರೀ ರಕ್ತೇಶ್ವರಿ ದೈವಸ್ಥಾನದ ಪ್ರಧಾನ ಅರ್ಚಕ ರಂಗನಾಥ ಭಟ್, ನವೋದಯ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಸುನಿಲ್ ಕುಮಾರ್ ಜೈನ್, ಊರಿನ ಪ್ರಮುಖರಾದ ಪ್ರವೀಣ್ ಪಾಂಡಿ ಕುರ್ಮಳಿಗುತ್ತು, ಮೋಹನ್‌ದಾಸ್ ಹೆಗ್ಡೆ ಅಡಪ್ಪಗುತ್ತು, ಸಂಪತ್ ಹೆಗ್ಡೆ ಬಂಜಿನಡ್ಕಗುತ್ತು, ಸುಭಾಶ್ಚಂದ್ರ ಹೆಗ್ಡೆ ಮಾಭಿಗುತ್ತು, ಚಂದ್ರಯ್ಯ ಬೋಂಟ್ರ ಗಡಿ ಪ್ರಧಾನರು, ಬೆರ್ಮನಬೆಟ್ಟು ಬರ್ಕೆ, ಜಯ ಪೂಜಾರಿ ಕುಲಬರ್ಕೆ, ಅಣ್ಣಿಬೋಂಟ್ರ ಪರಾಡಿ ಬರ್ಕೆ, ಯೋಗೀಶ್ ಬೋಂಟ್ರ ಕಲ್ಲಾಪು ಬರ್ಕೆ, ಸಂಘದ ನಿರ್ದೇಶಕರಾದ ರವೀಂದ್ರನಾಥ ಜಿ.ಹೆಗ್ಡೆ, ಕುಂಬ್ರ ದಯಾಕರ ಆಳ್ವ, ಪಿ.ಬಿ. ದಿವಾಕರ ರೈ, ಶಾಖಾ ವ್ಯವಸ್ಥಾಪಕ ನವೀನ್ ಕುಮಾರ್ ಹಾಗೂ ಸಂಘದ ಮಹಾಪ್ರಬಂಧಕರಾದ ಗಣೇಶ್ ಜಿ.ಕೆ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
    ಕುಂಟಾಡಿ ಶ್ರೀ ಕೃಷ್ಣರಾಜ್ ರೈ ಸ್ವಾಗತಿಸಿದರು. ಪತ್ರಕರ್ತ ನವೀನ್ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕರಾದ ಪಿ.ಬಿ. ದಿವಾಕರ್ ರೈ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    K.Jairaj B Rai Kuntady Kuntady Shree Rakteshwari Temple Shree Ramakrishna Credit Co Operative Soceity
    Previous Articleಬೆಂಗಳೂರು ಮೆಟ್ರೋಗೆ ಅಮುಲ್ ಪ್ರವೇಶ
    Next Article ಅನನ್ಯ ಸೌಹಾರ್ದ ಸಹಕಾರಿ ಸಂಘದಿಂದ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಉಚಿತ ವಿತರಣೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.