ನವದೆಹಲಿ: ಸಹಕಾರ ಸಚಿವಾಲಯದ ಮಹತ್ವಾಕಾಂಕ್ಷೆಯ ಯೋಜನೆ ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯ ಭೂಮಿಪೂಜೆ ಸಮಾರಂಭ ಆಗಸ್ಟ್ ತಿಂಗಳಲ್ಲಿ ಗುಜರಾತ್ನ ಆನಂದ್ನಲ್ಲಿ ನಡೆಯಲಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಷಾ ತಿಳಿಸಿದ್ದಾರೆ.
https://chat.whatsapp.com/EbVKVnWB6rlHT1mWtsgbch
ಜುಲೈ ಅಂತ್ಯ ಅಥವಾ ಆಗಸ್ಟ್ ಆರಂಭದಲ್ಲಿ ಈ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ತ್ರಿಭುವನ್ ಸಹಕಾರಿ ವಿವಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ, ಇದು ಭಾರತದ ಸಹಕಾರಿ ಶಿಕ್ಷಣ ಕ್ಷೇತ್ರದಲ್ಲಿ ಒಂದು ಐತಿಹಾಸಿಕ ಕ್ಷಣವಾಗಲಿದೆ ಎಂದು ತಿಳಿಸಿದ್ದಾರೆ. ಸಹಕಾರ ಸಚಿವಾಲಯವು ಈಗಾಗಲೇ ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯದ ಮೊದಲ ಆಡಳಿತ ಮಂಡಳಿಯನ್ನು ರಚಿಸಿದ್ದು, ಈ ಮಂಡಳಿಯು ಕೇಂದ್ರ ಸಚಿವಾಲಯಗಳು, ರಾಜ್ಯ ಸರ್ಕಾರಗಳು ಮತ್ತು ದೇಶಾದ್ಯಂತದ ಪ್ರಮುಖ ಸಹಕಾರಿ ಸಂಸ್ಥೆಗಳ ಹಿರಿಯ ಅಧಿಕಾರಿಗಳನ್ನು ಒಳಗೊಂಡಿದೆ.
ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯವು ಸಹಕಾರಿ ಶಿಕ್ಷಣ, ಸಂಶೋಧನೆ ಮತ್ತು ತರಬೇತಿಗೆ ಮಾತ್ರ ಮೀಸಲಾಗಿರುವ ಭಾರತದ ಮೊದಲ ಸಂಸ್ಥೆಯಾಗಲಿದೆ. ಭಾರತದ ಸಹಕಾರಿ ಚಳವಳಿಯನ್ನು ಪುನರುಜ್ಜೀವನಗೊಳಿಸುವ ಸರ್ಕಾರದ ಧ್ಯೇಯಕ್ಕೆ ಅನುಗುಣವಾಗಿ ಸಹಕಾರಿ ಜ್ಞಾನ ಮತ್ತು ಸಾಮರ್ಥ್ಯ ನಿರ್ಮಾಣ ಮಾಡುವ ಮಹತ್ವದ ಉದ್ದೇಶ ಹೊಂದಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

