ಬೈಂದೂರು: ಇಲ್ಲಿನ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಳೆದ ಸಾಲಿನಲ್ಲಿ 225 ಕೋಟಿ ರೂ. ಅಧಿಕ ವ್ಯವಹಾರ ನಡೆಸಿ, 79,17,693.40 ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಸ್.ರಾಜು ಪೂಜಾರಿ ಹೇಳಿದರು.
https://chat.whatsapp.com/EbVKVnWB6rlHT1mWtsgbch
ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ಭಾನುವಾರ ನಡೆದ 2024-25ನೇ ಸಾಲಿನ ಸಂಘದ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾನಮನಸ್ಕರು ಸೇರಿ ಸ್ಥಾಪಿಸಿದ ಈ ಸಂಸ್ಥೆ ಜನಸಾಮಾನ್ಯರ ಸಂಸ್ಥೆಯಾಗಿ ಜಿಲ್ಲೆಯಲ್ಲೇ ಹೆಸರು ಗಳಿಸಿದೆ. ಸಮಾಜದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿ, ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗಿದೆ. ಬೈಂದೂರಿನಲ್ಲಿ 16 ವರ್ಷಗಳ ಹಿಂದೆ ಹುಟ್ಟಿಕೊಂಡ ನಮ್ಮ ಸಂಘವು ಬೈಂದೂರಿನ ಕೇಂದ್ರಸ್ಥಾನದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ನಾಗೂರು, ಗೋಳಿಹೊಳೆ, ನಾವುಂದ, ಕಂಬದಕೋಣೆಗಳಲ್ಲಿ ಶಾಖೆಯನ್ನು ತೆರೆಯಲಾಗಿದೆ. ವರ್ಷಾಂತ್ಯಕ್ಕೆ 43 ಕೋಟಿ ರೂಪಾಯಿ ಠೇವಣೆ ಹೊಂದಿದ್ದು ಒಟ್ಟು 225 ಕೋಟಿಗೂ ಅಧಿಕ ವಾರ್ಷಿಕ ವ್ಯವಹಾರ ಹೊಂದಿದ್ದು ಸಂಘದ ಸದಸ್ಯರಿಗೆ ಶೇ.13 ಡಿವಿಡೆಂಡ್ ಘೋಷಿಸಲಾಗಿದೆ ಎಂದು ತಿಳಿಸಿದರು.







ಸಂಘದ ಉಪಾಧ್ಯಕ್ಷ ಎಂ.ವಿನಾಯಕ ರಾವ್, ನಿರ್ದೇಶಕರಾದ ಸೀತಾರಾಮ ಮಡಿವಾಳ, ಅಣ್ಣಪ್ಪ ಪೂಜಾರಿ, ರಾಮಕೃಷ್ಣಖಾರ್ವಿ, ಮಂಜು ಪೂಜಾರಿ, ಮಂಜುನಾಥ ಪೂಜಾರಿ, ಪ್ರಶಾಂತ, ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಅಧೀಕ್ಷಕ ಡಾ.ನಾಗರಾಜ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ನಾವುಂದ ಶಾಖೆಯ ಪ್ರಬಂಧಕ ಶ್ರೀನಿವಾಸ ಸ್ವಾಗತಿಸಿದರು. ಸಂಘದ ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ ವಾರ್ಷಿಕ ವರದಿ ಮಂಡಿಸಿ ಕಾರ್ಯಕ್ರಮ ನಿರೂಪಿಸಿದರು. ಕಂಬದಕೋಣೆ ಶಾಖಾ ವ್ಯವಸ್ಥಾಪಕ ರಾಜೇಂದ್ರ ವಂದಿಸಿದರು. ಸಿಬ್ಬಂದಿ ಸಂತೋಷ ಸಹಕರಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

