Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ಬೈಂದೂರಿನಲ್ಲಿ ಎಂಸಿಸಿ ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ
    News

    ನಾಳೆ ಬೈಂದೂರಿನಲ್ಲಿ ಎಂಸಿಸಿ ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

    adminBy adminAugust 2, 2025

    ಮಂಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಂಸಿಸಿ ಬ್ಯಾಂಕ್‌ನ 20ನೇ ಶಾಖೆ ಬೈಂದೂರಿನಲ್ಲಿ ಆಗಸ್ಟ್‌ 3ರಂದು ಉದ್ಘಾಟನೆಗೊಳ್ಳಲಿದೆ.

    https://chat.whatsapp.com/EbVKVnWB6rlHT1mWtsgbch
    ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಬೈಂದೂರಿನ ಹೋಲಿಕ್ರಾಸ್ ಚರ್ಚ್‌ನ ಧರ್ಮಗುರುಗಳಾದ ವಂದನೀಯ ವಿನ್ಸೆಂಟ್ ಕುವೆಲ್ಲೊ ಶಾಖೆಯನ್ನು ಆಶೀರ್ವದಿಸಲಿದ್ದಾರೆ. ಬೈಂದೂರಿನ ಶಾಸಕ ಗುರುರಾಜ್ ಗಂಟಿಹೊಳೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಾಬು ಶೆಟ್ಟಿ, ಬೈಂದೂರು ಸೇಂಟ್ ಥಾಮಸ್ ರೆಸಿಡೆನ್ಸಿಯಲ್ ಸ್ಕೂಲ್‌ನ ಪ್ರಾಂಶುಪಾಲ ವಂದನೀಯ ಫಿಲಿಪ್ ನೆಲಿವಿಲ್ಲ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಸದಾಶಿವ ಡಿ.ಪಡುವರಿ, ಶಿರೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕಾಪ್ಸಿನೂರ್ ಮೊಹಮ್ಮದ್, ನಾಡದೋಣಿ ರಾಜ್ಯ ಸಂಘದ ಅಧ್ಯಕ್ಷ ನಾಗೇಶ್ ಖಾರ್ವಿ, ಬೈಂದೂರಿನ ವಕೀಲರ ಸಂಘದ ಅಧ್ಯಕ್ಷ ಮೋಬಿ ಪಿ.ಸಿ. ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎಂಸಿಸಿ ಬ್ಯಾಂಕಿನ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವ, ನಿರ್ದೇಶಕರಾದ ಆಂಡ್ರ್ಯೂ ಡಿಸೋಜ, ಡಾ.ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ.ರೊಡ್ರಿಗಸ್, ಡೇವಿಡ್ ಡಿಸೋಜ, ಎಲ್ರಾಯ್‌ ಕಿರಣ್ ಕ್ರಾಸ್ಟೊ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೋಜ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸಿ.ಜಿ.ಪಿಂಟೊ, ಸುಶಾಂತ್ ಸಲ್ದಾನ್ಹಾ, ಐರಿನ್ ರೆಬೆಲ್ಲೊ, ಡಾ.ಫ್ರೀಡಾ ಡಿಸೋಜ, ಆಲ್ವಿನ್‌ ಮೊಂತೇರೊ, ಫೆಲಿಕ್ಸ್ ಡಿಕ್ರೂಜ್, ಶರ್ಮಿಳಾ ಮಿನೇಜಸ್, ಬ್ಯಾಂಕಿನ ಮಹಾಪ್ರಬಂಧಕರಾದ ಸುನಿಲ್ ಮಿನೇಜಸ್‌, ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ.


    ಎಂಸಿಸಿ ಬ್ಯಾಂಕ್‌ನ ವಿವಿಧ ಕಾರ್ಯಕ್ರಮಗಳು:
    ಆಗಸ್ಟ್‌ 9ರಂದು ಬೆಳ್ಮಣ್‌ನಲ್ಲಿ ಎಂಸಿಸಿ ಬ್ಯಾಂಕ್‌ನ 9ನೇ ಎಟಿಎಂ, 10ರಂದು ಸುರತ್ಕಲ್ ನಲ್ಲಿ 10ನೇ ಎಟಿಎಂ, 17ರಂದು ಕುಲಶೇಖರ ಶಾಖೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಮತ್ತು 11ನೇ ಎಟಿಎಂ ಉದ್ಘಾಟನೆಗೊಳ್ಳಲಿದೆ. ಸೆಪ್ಟೆಂಬರ್‌ 14ರಂದು ಕಿನ್ನಿಗೋಳಿಯಲ್ಲಿ 12ನೇ ಎಟಿಎಂ, 27ರಂದು ಉಡುಪಿ ಶಾಖೆಯಲ್ಲಿ 13ನೇ ಎಟಿಎಂ, ಅಕ್ಟೋಬರ್‌ 5ರಂದು ಸಂತೆಕಟ್ಟೆ ಬ್ರಾಂಚ್‌ ಉದ್ಘಾಟನೆ ಜೊತೆಗೆ 14ನೇ ಎಟಿಎಂ ಉದ್ಘಾಟನೆಗೊಳ್ಳಲಿದೆ ಎಂದು ಬ್ಯಾಂಕಿನ ಅಧ್ಯಕ್ಷ ಅನಿಲ್‌ ಲೋಬೊ ತಿಳಿಸಿದ್ದಾರೆ.

    ಗಮನಾರ್ಹ ಪ್ರಗತಿ
    ಪ್ರಸಕ್ತ ವಿತ್ತೀಯ ವರ್ಷದಲ್ಲಿ ಎಂಸಿಸಿ ಬ್ಯಾಂಕ್‌ ಎಲ್ಲಾ ವ್ಯವಹಾರ ಮಾಪನಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯವ್ಯಾಪ್ತಿಯು ಪ್ರಸ್ತುತ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡ ನಂತರ ಇಡೀ ಕರ್ನಾಟಕ ರಾಜ್ಯಾದ್ಯಂತ ವಿಸ್ತರಿಸಿದೆ. ಶೀಘ್ರವಾಗಿ ಕರ್ನಾಟಕ ರಾಜ್ಯಾದ್ಯಂತ ಶಾಖೆಗಳನ್ನು ವಿಸ್ತರಿಸುವ ಕಾರ್ಯಯೋಜನೆಯನ್ನೂ ರೂಪಿಸಿದೆ ಎಂದು ಎಂಸಿಸಿ ಬ್ಯಾಂಕ್‌ ಅಧ್ಯಕ್ಷ ಸಹಕಾರ ರತ್ನ ಅನಿಲ್‌ ಲೋಬೊ ಮಾಹಿತಿ ನೀಡಿದ್ದಾರೆ. ಎಂಸಿಸಿ ಬ್ಯಾಂಕ್‌ನಲ್ಲಿ ಅನಿಲ್ ಲೋಬೊ ನೇತೃತ್ವದ ಆಡಳಿತ ಮಂಡಳಿಯು 2018ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಆ ಬಳಿಕ ಅಭೂತಪೂರ್ವ ಪ್ರಗತಿ ದಾಖಲಿಸಿದೆ. ರೂ. 304 ಕೋಟಿ ಇದ್ದ ಬ್ಯಾಂಕಿನ ಠೇವಣಿಯು 2025ರಲ್ಲಿ ರೂ. 728 ಕೋಟಿಗೆ ತಲುಪಿದ್ದು, ಶೇಕಡಾ 139ರಷ್ಟು ಪ್ರಗತಿ ದಾಖಲಿಸಿದೆ. ರೂ. 191 ಕೋಟಿ ಇದ್ದ ಸಾಲ ಮತ್ತು ಮುಂಗಡಗಳು ರೂ. 572 ಕೋಟಿಗೆ ತಲುಪಿದ್ದು, ಶೇಕಡಾ 199ರಷ್ಟು ಪ್ರಗತಿ ದಾಖಲಿಸಿದೆ. ರೂ. 13 ಕೋಟಿ ಇದ್ದ ಪಾಲು ಬಂಡವಾಳ ರೂ. 33 ಕೋಟಿಗೆ ತಲುಪಿದ್ದು, ಶೇಕಡಾ 154ರಷ್ಟು ಪ್ರಗತಿ ದಾಖಲಿಸಿದೆ. ಬ್ಯಾಂಕಿನ ರಿಸರ್ವ್ ರೂ. 29 ಕೋಟಿಯಿಂದ ರೂ. 79 ಕೋಟಿಗೆ ತಲುಪಿದ್ದು, ಶೇಕಡಾ 172ರಷ್ಟು ಪ್ರಗತಿ ದಾಖಲಾಗಿದೆ. ರೂ. 496 ಕೋಟಿ ಇದ್ದ ವ್ಯವಹಾರ ರೂ. 1300 ಕೋಟಿಗೆ ತಲುಪಿದ್ದು, ಶೇಕಡಾ 162ರಷ್ಟು ಪ್ರಗತಿಯಾಗಿದೆ. ಶೇಕಡಾ 11.70 ಇದ್ದ ಬ್ಯಾಂಕಿನ CRAR (Capital to Risk Assets Ratio) ಪ್ರಮಾಣವು ಶೇಕಡಾ 19.82 ತಲುಪಿದ್ದು ಶೇಕಡಾ 62ರಷ್ಟು ಪ್ರಗತಿ ದಾಖಲಿಸಿದೆ. ಶೇಕಡಾ 0.56 ಇದ್ದ ಬ್ಯಾಂಕಿನ ರಿಟರ್ನ್ ಆನ್ ಅಸೆಟ್ಸ್ ಮೌಲ್ಯವು ಶೇಕಡಾ 1.40ಗೆ ತಲುಪಿ ಶೇಕಡಾ 150 ಪ್ರಗತಿ ದಾಖಲಿಸಿದೆ. ಬ್ಯಾಂಕಿನ ಪ್ರಗತಿಯ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿರುವ ಸಮರ್ಥ ಆಡಳಿತ ಮಂಡಳಿ, ಅದಕ್ಕನುಗುಣವಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದ ಶ್ರಮ ಹಾಗೂ ಬ್ಯಾಂಕಿನ ಆರ್ಥಿಕ ಪ್ರಗತಿಯತ್ತ ಗಮನಹರಿಸಿ ಕಾರ್ಯಯೋಜನೆ ಹಮ್ಮಿಕೊಂಡಿದೆ ಎಂದು ಅನಿಲ್‌ ಲೋಬೋ ತಿಳಿಸಿದ್ದಾರೆ.

    Anil Lobo Banking Branch Inauguration Byndoor Co Operative ministry Cooperative Cooperative Registrar MCC BANK
    Previous Articleಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಅಶಕ್ತರಿಗೆ ವೀಲ್‌ಚೇರ್‌ ಕೊಡುಗೆ
    Next Article ಉಡುಪಿ ಸಿಂಡಿಕೇಟ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಯುನಿಗ್ಸ್ ಮೊಬೈಲ್ ಬ್ಯಾಂಕಿಂಗ್ ಅಪ್ಲಿಕೇಶನ್ ಪ್ರಾರಂಭ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.