ಮಂಗಳೂರು: ರಾಜ್ಯದಲ್ಲಿ ನಿರಂತರ ಸುರಿಯುತ್ತಿರುವ ಮಳೆಯುಂದಾಗಿ ಅಡಿಕೆ ಬೆಳೆ ಭಾಗಶಃ ನಾಶವಾಗಿದ್ದು, ಮಳೆ ಇನ್ನಷ್ಟು ಮುಂದುವರಿದರೆ ಹೆಚ್ಚಿನ ಬೆಳೆ ನಾಶವಾಗಲಿದೆ. ಭಾರಿ ಮಳೆಯಿಂದ ನಾಶವಾಗಿರುವ ಅಡಿಕೆ ಬೆಳೆಯ ನಾಶದ ಪ್ರಮಾಣದ ಬಗ್ಗೆ ಸಮೀಕ್ಷೆ ನಡೆಸಿ, ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಲಿ ಮನವಿ ಮಾಡಿದ್ದಾರೆ.
https://chat.whatsapp.com/EbVKVnWB6rlHT1mWtsgbch


ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಾಡಿಕೆಗಿಂತಲೂ ಜಾಸ್ತಿ ಮಳೆ ಸುರಿಯುತ್ತಿದೆ. ಈಗಾಗಲೇ ಎರಡು ಬಾರಿ ಔಷಧ ಸಿಂಪಡಿಸಿದರೂ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೊಳೆರೋಗದಿಂದ ಅರ್ಧದಷ್ಟು ಬೆಳೆ ನಾಶವಾಗಿದೆ. ಸರಕಾರ ಕೂಡಲೇ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

