ಸುರತ್ಕಲ್: ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸಹಕಾರಿ ಸಂಘದ ಅಧ್ಯಕ್ಷರಾದ ನಾಗೇಶ್ ಕುಲಾಲ್ ಅಧ್ಯಕ್ಷತೆಯಲ್ಲಿ ಸುರತ್ಕಲ್ ಸಿಟಿ ಸ್ಕ್ವೇರ್ ಕಟ್ಟಡದಲ್ಲಿ ಶನಿವಾರ ನಡೆಯಿತು.
https://chat.whatsapp.com/EbVKVnWB6rlHT1mWtsgbch
ವಾರ್ಷಿಕ ವರದಿ ಮತ್ತು ಲೆಕ್ಕಪತ್ರವನ್ನು ಸಂಘದ ಪ್ರಧಾನ ವ್ಯವಸ್ಥಾಪಕರಾದ ಸಂಜೀವ ಮೂಲ್ಯ ಇವರು ಮಂಡಿಸಿದರು. ಸಂಘವು ವಾರ್ಷಿಕ 281 ಕೋಟಿ ರೂ. ಒಟ್ಟು ವ್ಯವಹಾರ ನಡೆಸಿ ರೂ. 48,68,689.60 ನಿವ್ವಳ ಲಾಭ ಗಳಿಸಿದೆ. ಸಂಘವು ೧೮ ವರ್ಷಗಳಿಂದ ನಿರಂತರ \18 ಲಾಭ ಗಳಿಸುತ್ತಿದ್ದು, ಲೆಕ್ಕ \ಪರಿಶೋಧನೆಯಲ್ಲಿ ಎ ಶ್ರೇಣಿಯಲ್ಲಿ ವರ್ಗೀಕರಣಗೊಂಡಿದೆ. ಸಂಘವು ಕ್ಲೌಡ್ ತಂತ್ರಾಂಶವನ್ನು ಹಾಗೂ ಆರ್ಟಿಜಿಎಸ್ / ನೆಫ್ಟ್ ಸೇವೆ, ವಾಹನ ವಿಮಾ ಸೌಲಭ್ಯ ಹಾಗೂ ಇ-ಸ್ಟಾಂಪಿಂಗ್ ಸೇವೆಯನ್ನು ಹೊಂದಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಸಂಘದ ಅಧ್ಯಕ್ಷರು ತಿಳಿಸಿದರು.

ಪ್ರಸ್ತುತ ಸಾಲಿನಲ್ಲಿ ಸಂಘದ ವತಿಯಿಂದ ತನ್ನ ಲಾಭದಲ್ಲಿ ಸದಸ್ಯರಿಗೆ ಶೇಕಡಾ 18ರಷ್ಟು ಡಿವಿಡೆಂಡ್ ನೀಡುವುದಾಗಿ ತೀರ್ಮಾನಿಸಲಾಯಿತು. ಸಹಕಾರಿ ಸಂಘವು ತನ್ನ ಕ್ಷಿಪ್ರ ಹಾಗೂ ಪಾರದರ್ಶಕ ಬೆಳವಣಿಗೆಯ ಮೂಲಕ ಎಸ್ಸಿಡಿಸಿಸಿ ಬ್ಯಾಂಕಿನಿಂದ 2023-24ನೇ ಸಾಲಿನ ಸಾಧನಾ ಪ್ರಶಸ್ತಿ ಪಡೆದಿದೆ.
ಸಂಘದ ಉಪಾಧ್ಯಕ್ಷರಾದ ಮಾಧವ ಬಂಗೇರ, ನಿರ್ದೇಶಕರಾದ ಮುದ್ದು ಎಸ್.ಮೂಲ್ಯ, ಭೋಜ ಬಂಗೇರ, ಮೋಹನ್ ಐ ಮೂಲ್ಯ, ಬಾಬುಚಂದ್ರ ಐ, ಲೀಲಾ ಬಂಜನ್, ರತ್ನಾವತಿ, ಉಷಾ ಆರ್.ಬಂಗೇರ, ಗಂಗಾಧರ್ ಬಂಜನ್ ಹಾಗೂ ದಯಾನಂದ ಪಡ್ರೆ ಮತ್ತು ಹಿರಿಯ ಲೆಕ್ಕಪರಿಶೋಧಕರಾದ ಪ್ರಸನ್ನ ಶೆಣೈ, ಆಂತರಿಕ ಲೆಕ್ಕಪರಿಶೋಧಕರಾದ ಜಗಜೀವನ್ದಾಸ್ ಉಪಸ್ಥಿತರಿದ್ದರು. ನಿರ್ದೇಶಕರಾದ ಮುರಲಿದಾಸ್ ಎಮ್ ಕುಲಾಲ್ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com





