ಬೆಂಗಳೂರು: ಈ ಹಿಂದೆ ತಿರಸ್ಕೃತಗೊಂಡಿದ್ದ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಮಸೂದೆ ವಿಧಾನ ಪರಿಷತ್ನಲ್ಲಿ ಶುಕ್ರವಾರ ಮತ್ತೊಮ್ಮೆ ಮಂಡನೆಯಾಗಿ ಅನುಮೋದನೆ ಪಡೆದುಕೊಂಡಿದೆ.
https://chat.whatsapp.com/EbVKVnWB6rlHT1mWtsgbch
ವಿಧಾನಸಭೆಯಲ್ಲಿ ಅಂಗೀಕಾರಗೊಂಡು ಮೊದಲನೇ ಸಲ ಮಂಡನೆಯಾಗಿದ್ದ ಈ ಮಸೂದೆಗೆ ಪರಿಷತ್ನಲ್ಲಿ ಮೂರು ಮತಗಳಿಂದ ಸೋಲಾಗಿತ್ತು. ಈ ಹಿನ್ನೆಲೆಯಲ್ಲಿ ಕೆಲವು ತಿದ್ದುಪಡಿಯೊಂದಿಗೆ ವಿಧಾನಸಭೆ ಈ ಮಸೂದೆಯನ್ನು ಗುರುವಾರ ಮತ್ತೊಮ್ಮೆ ಅಂಗೀಕರಿಸಿತ್ತು. ಶುಕ್ರವಾರ ಮಸೂದೆಯನ್ನು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ. ಪಾಟೀಲ್ ಮತ್ತೊಮ್ಮೆ ವಿಧಾನ ಪರಿಷತ್ ನಲ್ಲಿ ಮಂಡಿಸಿ ಅಂಗೀಕಾರ ಪಡೆದುಕೊಂಡರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com

