ಮಂಗಳೂರು: ಪಾಣೆಮಂಗಳೂರಿನ ಸುಮಂಗಲಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಶನಿವಾರ ಮಂಗಳೂರಿನ ಎಸ್ಸಿಡಿಸಿಸಿ ಬ್ಯಾಂಕ್ನಲ್ಲಿ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಗಿದೆ.
https://chat.whatsapp.com/EbVKVnWB6rlHT1mWtsgbch
ಎಸ್ಸಿಡಿಸಿಸಿ ಬ್ಯಾಂಕಿನ ವಾರ್ಷಿಕ ಮಹಾಸಭೆ ಶನಿವಾರ ಮಂಗಳೂರಿನಲ್ಲಿ ನಡೆದಿದ್ದು ಆ ಸಮಾರಂಭದಲ್ಲಿ ಐದನೇ ಬಾರಿ ಸುಮಂಗಲಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಸಾಧನಾ ಪುರಸ್ಕಾರ ನೀಡಲಾಗಿದೆ. ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸತತ ಐದನೇ ಬಾರಿ ಸಾಧನಾ ಪ್ರಶಸ್ತಿ ಪಡೆದಿದೆ. ಸುಮಂಗಲಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ನಾಗೇಶ್ ಕಲ್ಲಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಸಂತ ಪಿ. ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಸಂಘದ ನಿರ್ದೇಶಕರಾದ ಸಚಿನ್ ಮೆಲ್ಕಾರ್, ಬಾಲಕೃಷ್ಣಸೆರ್ಕಳ, ಈಶ್ವರ ಸಪಲ್ಯ ಮೆಲ್ಕಾರ್, ನರ್ಸಪ್ಪ ಅಮೀನ್, ಸಿಬ್ಬಂದಿ ದೀಕ್ಷಿತ್, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ಎಚ್.ಎನ್ ರಮೇಶ್, ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ರಾಜಾರಾಮ್ ಭಟ್, ಭಾಸ್ಕರ ಕೋಟ್ಯಾನ್, ಕೆ.ಜೈರಾಜ್ ಬಿ.ರೈ ಮೊದಲಾದವರು ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com




