ಬೆಳ್ಳಾರೆ: ದ.ಕ.ಜಿಲ್ಲಾ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2024-25ನೇ ಸಾಲಿನ ಸಂಘದ ಗಣನೀಯ ಸೇವೆಯನ್ನು ಗುರುತಿಸಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
https://chat.whatsapp.com/EbVKVnWB6rlHT1mWtsgbch
ಮಂಗಳೂರಿನಲ್ಲಿ ನಡೆದ ಎಸ್.ಸಿ.ಡಿ.ಸಿ.ಸಿ.ಬ್ಯಾಂಕಿನ ಮಹಾಸಭೆಯಲ್ಲಿ ಎಸ್.ಸಿ.ಡಿ.ಸಿ.ಸಿ.ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಆರ್.ಕೆ.ಭಟ್ ಕುರುಂಬುಡೇಲು ಮತ್ತು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುನಂದಾ ಆಳ್ವ ಅವರನ್ನು ಪ್ರಶಸ್ತಿ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಕರುಣಾಕರ ಆಳ್ವ, ಭಾಸ್ಕರ ನೆಟ್ಟಾರು, ವಾಸುದೇವ ನಾಯಕ್, ಜನಾರ್ಧನ ಗೌಡ ಆರ್ವಾರ, ಬೀಯಾಳು ಹಾಗೂ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯ ರೈ ಉಪಸ್ಥಿತರಿದ್ದರು.




