Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ
    News

    ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

    adminBy adminSeptember 9, 2025

    ಮೂಡುಬಿದಿರೆ: ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 2024-25ನೇ ಸಾಲಿನ 11ನೇ ವರ್ಷದ ಮಹಾಸಭೆಯು ಭಾನುವಾರ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು.
    ಸಹಕಾರಿಯ ಅಧ್ಯಕ್ಷ ರಂಜಿತ್ ಪೂಜಾರಿ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದರು. ಸಂಘವು 2.32 ಕೋಟಿ ರೂ. ಸ್ವಸಹಾಯ ಸಂಘಗಳಿಗೆ ಸಾಲ ನೀಡುತ್ತಾ ಬಂದಿದೆ. ಮಾತ್ರವಲ್ಲದೇ 2019ರಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಹಾಗೂ ಗ್ರಾಹಕರಿಗೆ ವೈದ್ಯಕೀಯ ನೆರವು, ವಿದ್ಯಾಭ್ಯಾಸದ ನೆರವು, ಶೌಚಗೃಹದ ನೆರವು ಹಾಗೂ ಮನೆ ಕಟ್ಟುವವರಿಗೆ ಧನಸಹಾಯವನ್ನು ವಿಶೇಷ ಸೇವಾ ಮನೋಭಾವನೆಯನ್ನಿಟ್ಟುಕೊಂಡು ಬಂದ ಲಾಭಾಂಶದಲ್ಲಿ ಸಾಮಾಜಿಕ ಕೆಲಸ ಕಾರ್ಯಗಳಲ್ಲೂ ಸಹಕಾರಿ ಸಂಘ ತೊಡಗಿಸಿಕೊಂಡಿದೆ ಎಂದರು.

    https://chat.whatsapp.com/EbVKVnWB6rlHT1mWtsgbch
    ವಾರ್ಷಿಕವಾಗಿ ಸಂಸ್ಥೆಯ ಆದಾಯದಲ್ಲಿ 2.50 ಲಕ್ಷ ರೂ. ಅನ್ನು ಸ್ವಸಹಾಯ ಸಂಘಗಳನ್ನು ಸೇರಿಸಿ, ಸಮಾಜದ ಅಗತ್ಯಗಳಿಗೆ ಸ್ಪಂದಿಸಿ ಸಾಮಾಜಿಕ ಕಾರ್ಯಗಳಲ್ಲೂ ಪಂಚಶಕ್ತಿ ಸಹಕಾರಿ ಸಂಸ್ಥೆಯೂ ನೆರವಾಗುತ್ತಿದೆ. ಈ ಬಾರಿ ಪುರಸಭೆ ಮುಂಭಾಗದಲ್ಲಿ ಫಾರ್ಚೂನರ್ ಬಿಲ್ಡಿಂಗ್‌ನಲ್ಲಿ 1 ಕೋಟಿ ರೂ. ವೆಚ್ಚದ ಸ್ವಂತ ಕಟ್ಟಡವನ್ನು ಖರೀದಿಸಲಾಗಿದೆ. ಮುಂದಿನ ದಿನಗಳಲ್ಲಿ ಆ ಸ್ವಂತ ಕಟ್ಟಡಕ್ಕೆ ಸಹಕಾರಿ ಸಂಘವು ಸ್ಥಳಾಂತರಗೊಳ್ಳಲಿದೆ ಎಂದರು.
    ಸ್ವಸಹಾಯ ತಂಡದ ಸದಸ್ಯರ ಮಕ್ಕಳಿಗೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.85ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. 2024-25ನೇ ಸಾಲಿನಲ್ಲಿ ಅತೀ ಹೆಚ್ಚು ಪಿಗ್ಮಿ ಸಂಗ್ರಹಿಸಿದ ದಿನೇಶ್ ಪೂಜಾರಿ ಅವರನ್ನು ಹಾಗೂ ಉತ್ತಮ ಗ್ರಾಹಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಸ್ವ ಸಹಾಯ ತಂಡಗಳಲ್ಲಿ ಎ ಗ್ರೇಡ್ ಪಡೆದುಕೊಂಡಿರುವ ಸ್ವಸಹಾಯ ತಂಡದ ಅಧ್ಯಕ್ಷರು, ಕಾರ್ಯದರ್ಶಿಗಳನ್ನು ಗೌರವಿಸಲಾಯಿತು. ಶಾಖಾಧಿಕಾರಿ ಯು.ಆರ್ ಮಧ್ಯಸ್ಥ ಮಹಾಸಭೆ ನೋಟಿಸ್ , 2024-25ನೇ ಸಾಲಿನ ವಾರ್ಷಿಕ ವರದಿ ಮತ್ತು ಮಂಜೂರಾತಿ, ಹಾಗೂ ಸಮಾಜಸೇವೆಗೆ ಸಹಾಯಧನ ಪ್ರಸಾದ್ ಆಚಾರ್ಯಗೆ ಮತ್ತು ಅಶಕ್ತ ಕುಟುಂಬಗಳ ಸಹಾಯಧನ ವಿವರವನ್ನು ವಾಚಿಸಿದರು.


    ನಿರ್ದೇಶಕ ರಮೇಶ್ ಎಸ್ ಶೆಟ್ಟಿ 2023-24ನೇ ಸಾಲಿನ ಮಹಾಸಭೆಯ ನಡವಳಿಯನ್ನು ಮಂಡಿಸಿದರು.
    2024-25ನೇ ಸಾಲಿನ ಪರಿಶೋಧಿತ ಲೆಕ್ಕಪತ್ರಗಳನ್ನು ಗಣೇಶ್ ವಿವರಿಸಿ, ಬಜೆಟ್ ಗಿಂತ ಜಾಸ್ತಿಯಾದ ಖರ್ಚಿನ ಮಂಜೂರಾತಿ ವರದಿಯನ್ನು ಸ್ವಾತಿ ಓದಿ ತಿಳಿಸಿದರು. ಲಾಭಾಂಶ ವಿಂಗಡಣೆಯನ್ನು ರಾಜೇಂದ್ರ, ಹಾಗೂ 2025-26ನೇ ಸಾಲಿನ ಬಜೆಟ್ ನ್ನು ಶರತ್ ಜೆ.ಶೆಟ್ಟಿ ಮಂಡಿಸಿದರು. ಉಪಾಧ್ಯಕ್ಷ ಶಂಕರನಾರಾಯಣ ಭಟ್ ಲೆಕ್ಕ ಪರಿಶೋಧನೆಯ ಪಾಲನಾ ವರದಿ ವಾಚಿಸಿದರು. ನಿರ್ದೇಶಕ ಗೋಪಾಲ್ ಶೆಟ್ಟಿಗಾರ್ ಕಾರ್ಯಕ್ರಮ ನಿರೂಪಿಸಿ, ರಮೇಶ್ ಎಸ್.ಶೆಟ್ಟಿ ಸ್ವಾಗತಿಸಿದರು. ಉಷಾ ಭಂಡಾರಿ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Co Operative ministry Cooperative Department Panchashakti Vividhoddesha Souharda Sahakara Sangha Souharda Sahakari Varshika Mahasabhe
    Previous Articleದೇವಮಾನವ ಕೀರ್ತಿಶೇಷ ಪಾಲ್ಕೆ ಬಾಬುರಾಯ ಆಚಾರ್ಯರ ತ್ಯಾಗ, ಸೇವೆ, ಸಮರ್ಪಣಾ ಭಾವಗಳ ನೆನಪು ಬದುಕಿಗೆ ದಾರಿದೀಪ
    Next Article ಜಯಭಾರತ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.