ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಸಿ.ಪಿ.ರಾಧಾಕೃಷ್ಣನ್ ಅವರನ್ನು ಭಾರತದಾದ್ಯಂತ ಸಹಕಾರಿ ಧುರೀಣರು ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರೀಯ ಮಟ್ಟದ ಸಹಕಾರಿ ಸಂಸ್ಥೆಗಳಿಂದ ಹಿಡಿದು ತಳಮಟ್ಟದ ನಾಯಕರವರೆಗೆ, ಎನ್ಡಿಎ ಅಭ್ಯರ್ಥಿಯ ಗೆಲುವನ್ನು ಅಭಿನಂದಿಸಿದ್ದಾರೆ.
https://chat.whatsapp.com/EbVKVnWB6rlHT1mWtsgbch
ಮಂಗಳವಾರ ಉಪರಾಷ್ಟ್ರಪತಿ ಚುನಾವಣೆ ನಡೆದಿದ್ದು, ಸಿ.ಪಿ ರಾಧಾಕೃಷ್ಣನ್ ಅವರು, ಇಂಡಿಯಾ ಕೂಟದ ಅಭ್ಯರ್ಥಿ ಆರ್.ಸುದರ್ಶನ ರೆಡ್ಡಿ ಅವರನ್ನು ಸೋಲಿಸಿ ಉಪರಾಷ್ಟ್ರಪತಿ ಹುದ್ದೆಗೆ ಏರಿದ್ದರು. ಫಲಿತಾಂಶ ಘೋಷಣೇಯಾದ ಸ್ವಲ್ಪ ಹೊತ್ತಿನಲ್ಲೇ ಭಾರತದ ರಾಷ್ಟ್ರೀಯ ಸಹಕಾರಿ ಒಕ್ಕೂಟ (ಎನ್ಸಿಯುಐ) ಅಧ್ಯಕ್ಷ ದಿಲೀಪ್ ಸಂಘಾನಿ, ಸಿ.ಪಿ. ರಾಧಾಕೃಷ್ಣನ್ ಅವರನ್ನು ಅಭಿನಂದಿಸಿದ್ದಾರೆ. ಸಹಕಾರ ಭಾರತಿ ಅಧ್ಯಕ್ಷ ಉದಯ್ ಜೋಶಿ ಶುಭಾಶಯ ತಿಳಿಸಿದ್ದಾರೆ. ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (NCCF) ಅಧ್ಯಕ್ಷ ವಿಶಾಲ್ ಸಿಂಗ್ ಕೂಡ ಸಿ.ಪಿ ರಾಧಾಕೃಷ್ಣನ್ ಅವರನ್ನು ಅಭಿನಂದಿಸಿದ್ದಾರೆ. ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDC) ಮಂಡಳಿ ಸದಸ್ಯ ಧನಂಜಯ್ ಸಿಂಗ್ ರಾಧಾಕೃಷ್ಣನ್ ಅವರನ್ನು ಅಭಿನಂದಿಸಿದ್ದು ಅವರ ನಾಯಕತ್ವದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಧಾಕೃಷ್ಣನ್ ಅವರ ನಾಯಕತ್ವ ಮತ್ತು ಸ್ಫೂರ್ತಿದಾಯಕ ಮಾರ್ಗದರ್ಶನದಲ್ಲಿ ದೇಶವು ಹೊಸ ಆವೇಗ ಮತ್ತು ಶಕ್ತಿ ಪಡೆಯುತ್ತದೆ ಮತ್ತು ಪ್ರಜಾಪ್ರಭುತ್ವದ ಆದರ್ಶಗಳು ಆಳವಾಗಿ ಬಲಗೊಳ್ಳುತ್ತವೆ ಎಂದು ನಾವು ನಂಬುತ್ತೇವೆ ಎಂದು ಅವರು ತಮ್ಮ ಶುಭಾಶಯದಲ್ಲಿ ತಿಳಿಸಿದ್ದಾರೆ.

ತಮಿಳುನಾಡಿನ ಹಿರಿಯ ರಾಜಕೀಯ ನಾಯಕ ಮತ್ತು ಎರಡು ಬಾರಿ ಸಂಸತ್ ಸದಸ್ಯರಾಗಿರುವ ರಾಧಾಕೃಷ್ಣನ್, ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 452 ಮತಗಳನ್ನು ಪಡೆದಿದ್ದು ಅವರ ಎದುರಾಳಿ ಸುದರ್ಶನ ರೆಡ್ಡಿ 300 ಮತ ಗಳಿಸಿದ್ದರು.

