ಮಂಗಳೂರು: ಇಲ್ಲಿನ ದೈವಜ್ಞ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ನ 2024-25ನೇ ಸಾಲಿನ 33ನೇ ವಾರ್ಷಿಕ ಸಾಮಾನ್ಯ ಸಭೆ ಸೊಸೈಟಿಯ ಅಧ್ಯಕ್ಷ ಎಸ್.ರಮಾನಂದ್ ಶೇಟ್ ಇವರ ಅಧ್ಯಕ್ಷತೆಯಲ್ಲಿ ದೈವಜ್ಞ ಕಲ್ಯಾಣ ಮಂಟಪದಲ್ಲಿ ನೆರವೇರಿತು.
https://chat.whatsapp.com/EbVKVnWB6rlHT1mWtsgbch
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಂತೋಷ್ ಶೇಟ್ ವಾರ್ಷಿಕ ವರದಿ ಮಂಡಿಸಿದರು. 2024-25ನೇ ಸಾಲಿನಲ್ಲಿ ಸಂಘವು 55.68 ಲಕ್ಷ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇಕಡಾ 10 ಡಿವಿಡೆಂಡ್ ಘೋಷಿಸಲಾಯಿತು. ಸಂಘವು 63.85 ಲಕ್ಷ ರೂಪಾಯಿ ಪಾಲು ಬಂಡವಾಳ, 21.96 ಕೋಟಿ ರೂಪಾಯಿ ಠೇವಣಿ ಹೊಂದಿದ್ದು ಸದಸ್ಯರಿಗೆ 19.80 ಕೋಟಿ ರೂಪಾಯಿ ಸಾಲ ನೀಡಿದೆ. ಸಂಘವು 2024- 2025ನೇ ಸಾಲಿನಲ್ಲಿ131 ಕೋಟಿ ರೂಪಾಯಿ ವ್ಯವಹಾರ ನಡೆಸಿದೆ. ಸಂಘವು ಸತತವಾಗಿ ‘ಎ’ ತರಗತಿಯ ಆಡಿಟ್ ವರ್ಗೀಕರಣ ಪಡೆಯುತ್ತ ಬಂದಿದೆ.

ಸಭೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಸದಸ್ಯರ ಮಕ್ಕಳನ್ನು ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು. ಸಭೆಯಲ್ಲಿ ಸಂಘದ ಉಪಾಧ್ಯಕ್ಷರಾದ ಕೆ.ಸುಧಾಕರ್ ಶೇಟ್, ನಿರ್ದೇಶಕರಾದ ಪ್ರಮೋದ್ ಕೆ.ಶೇಟ್, ಗುರುಪ್ರಸಾದ್ ಶೇಟ್, ಶ್ರೀಪಾದ ಬಿ.ರಾಯ್ಕರ್, ಬಿ.ಸುರೇಶ್ ಶೇಟ್, ರಾಜೇಶ್ ಎಲ್.ವಿ, ಜಯ ಪಿ.ಶೇಟ್, ನೂತನ್ ಜಿ. ಶೇಟ್ ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com









