ಬೆಂಗಳೂರು: ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ಸೌಹಾರ್ದ ಸಹಕಾರಿಗಳಿಗಾಗಿ ಚುನಾವಣಾ ಪೂರ್ವ ತಯಾರಿ ಕಾರ್ಯಕ್ರಮ ಗುರುವಾರ ಬೆಂಗಳೂರಿನ ಸಂಯುಕ್ತ ಸಹಕಾರಿಯ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನಡೆಸಲಾಯಿತು.
https://chat.whatsapp.com/JVAtKKe2M19AFO3W5629ZS?mode=ems_copy_t
ಬೆಂಗಳೂರು ನಾಲ್ಕನೇ ವಲಯದ ಸಹಕಾರ ಸಂಘಗಳ ಉಪನಿಬಂಧಕ ಪಿ.ಶಶಿಧರ್ ತರಬೇತಿ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ.ನಂಜನಗೌಡ ಅಧ್ಯಕ್ಷತೆ ವಹಿಸಿದ್ದರು. ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಬಿ.ಎಸ್.ಗುಂಡೂರಾವ್ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ನಿರ್ದೇಶಕರಾದ ಬಿ.ಹೆಚ್.ಕೃಷ್ಣರೆಡ್ಡಿ, ಮಂಜುನಾಥ್ ಭಾಗವಹಿಸಿದರು. ಸಂಯುಕ್ತ ಸಹಕಾರಿಯ ವ್ಯವಸ್ಥಾಪಕ ನಿರ್ದೇಶಕರಾದ ಶರಣಗೌಡ ಜಿ.ಪಾಟೀಲ್ ಪ್ರಾಸ್ತಾವಿಕ ಮಾತನಾಡಿದರು.
ಬೆಂಗಳೂರು ಪ್ರಾಂತೀಯ ಅಧಿಕಾರಿ ಶ್ರೀಧರ್ ಸ್ವಾಗತಿಸಿದರು. ಸಂಯುಕ್ತ ಸಹಕಾರಿಯ ಸೌಹಾರ್ದ ಅಭಿವೃದ್ಧಿ ಅಧಿಕಾರಿ ರವಿಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸೌಹಾರ್ದ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ವಂದಿಸಿದರು. ಸಹಕಾರಿಗಳ ಚುನಾವಣಾ ಪೂರ್ವ ತಯಾರಿ ಕುರಿತು ಸಹಕಾರ ಇಲಾಖೆಯ ಅಪರ ನಿಬಂಧಕ ಹೆಚ್.ಎಸ್. ನಾಗರಾಜಯ್ಯ ತರಬೇತಿ ನಡೆಸಿಕೊಟ್ಟರು. 58 ಸೌಹಾರ್ದ ಸಹಕಾರಿಗಳಿಂದ 77 ಜನರು ಭಾಗವಹಿಸಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com



