Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸೌಹಾರ್ದ ಸಹಕಾರಿ ಸಂಘಗಳ ಜೊತೆ ಇರಲಿದೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ
    News

    ಸೌಹಾರ್ದ ಸಹಕಾರಿ ಸಂಘಗಳ ಜೊತೆ ಇರಲಿದೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ

    adminBy adminSeptember 20, 2025

    ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಮಹಾಸಭೆಯಲ್ಲಿ ಅಧ್ಯಕ್ಷ ಭಾಸ್ಕರ ದೇವಸ್ಯ ಹೇಳಿಕೆ

    ಮಂಗಳೂರು: ರಾಜ್ಯ ಸರ್ಕಾರದ ಕೆಲವು ಹೊಸ ನೀತಿಗಳಿಂದಾಗಿ ಸೌಹಾರ್ದ ಸಹಕಾರಿ ಸಂಘಗಳಿಗೂ ಸಮಸ್ಯೆ ಉಂಟಾಗಿದೆ. ಇವುಗಳ ವಿರುದ್ಧ ಹೋರಾಟ ಮಾಡುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯು ಸದಾಕಾಲ ಸೌಹಾರ್ದ ಸಹಕಾರಿ ಸಂಘಗಳ ಜೊತೆ ಇರಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಭಾಸ್ಕರ ದೇವಸ್ಯ ಹೇಳಿದರು.‌

    https://chat.whatsapp.com/JVAtKKe2M19AFO3W5629ZS?mode=ems_copy_t
    ಮಂಗಳೂರಿನ ಶ್ರೀನಿವಾಸ ಹೋಟೆಲ್‌ ಸಭಾಂಗಣದಲ್ಲಿ ಶುಕ್ರವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ವರ್ಷದಿಂದ ಹೊಸ ಆಡಳಿತ ಸಮಿತಿ ರಚನೆಯಾದ ಬಳಿಕ ಒಕ್ಕೂಟಕ್ಕೆ ಸದಸ್ಯತ್ವ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗಿದೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಅದು ನಡೆಯಲಿಲ್ಲ. ಈ ವರ್ಷ ಶೇ.೧೦೦ ಸದಸ್ಯತ್ವ ಮಾಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು. ಎಲ್ಲ ಸೌಹಾರ್ದ ಸಂಘಗಳೂ ಜಿಲ್ಲಾ ಒಕ್ಕೂಟದಲ್ಲಿ ಸದಸ್ಯತ್ವ ಪಡೆದು ಬಲಶಾಲಿಯಾಗಿ ರೂಪುಗೊಳ್ಳಬೇಕು ಎಂದು ಅವರು ಹೇಳಿದರು.


    ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್‌ ಬಿ.ಎಸ್‌ ಮಾತನಾಡಿ, ಸೌಹಾರ್ದ ಸಹಕಾರಿ ಸಂಘಗಳ ಬಲವರ್ಧನೆಗೆ ಎಲ್ಲರೂ ಕೈಜೋಡಿಸಬೇಕು. ಸೆಪ್ಟೆಂಬರ್‌ ೧ರ ಮೊದಲು ಎಲ್ಲಾ ಸೌಹಾರ್ದ ಸಹಕಾರಿ ಸಂಘಗಳು ಆಡಿಟ್‌ ವರದಿಯನ್ನು ಸಂಬಂಧಪಟ್ಟ ಇಲಾಖೆಗಳು ಹಾಗೂ ಸಂಯುಕ್ತ ಸಹಕಾರಿಗೆ ಸಲ್ಲಿಸಬೇಕು. ಈ ವಿಷಯದ ಬಗ್ಗೆ ಎಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಆಡಳಿತ ಮಂಡಳಿ ಹಾಗೂ ಸಿಇಒಗಳು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.


    ಗೌರವ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್‌ ಬೈಲಾ ತಿದ್ದುಪಡಿ ಹಾಗೂ ಸರ್ಕಾರದ ಹೊಸ ಕಾಯ್ದೆಗಳ ಬಗ್ಗೆ ಮಾಹಿತಿ ನೀಡಿ ಹೊಸ ಕಾಯ್ದೆಗಳಿಂದಾಗಬಹುದಾದ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಈ ಬಗ್ಗೆ ಚರ್ಚೆ ನಡೆದು ಮುಂದಿನ ಕಾರ್ಯಯೋಜನೆಗಳನ್ನು ರೂಪಿಸುವ ಬಗ್ಗೆ ಸಲಹೆ ವ್ಯಕ್ತವಾಯಿತು. ಶ್ರೀಶಾ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಎಂ.ಎಸ್‌ ಗುರುರಾಜ್‌, ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಗಣೇಶ್‌ ಶೆಣೈ, ಪುತ್ತೂರಿನ ಅಶ್ವಿನಿ ಸೌಹಾರ್ದ ಸಹಕಾರಿಯ ನಿರ್ದೇಶಕರಾದ ಶಿವರಾಮ್ ಪ್ರಭು ಮೊದಲಾದವರು ಚರ್ಚೆಯಲ್ಲಿ ಪಾಲ್ಗೊಂಡರು.
    ಸೌಹಾರ್ದ ಅಭಿವೃದ್ಧಿ ಅಧಿಕಾರಿ ನಂದನ್‌ ಬಿ.ಎನ್‌, ಫೆಡರಲ್‌ ಅಧಿಕಾರಿ ರೋಹಿತ್‌ ಹಾಗೂ ಜಿಲ್ಲೆಯ ಸಹಕಾರಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷರಾದ ಸಂಜೀವ ಅಡ್ಯಾರ್‌ ಸ್ವಾಗತಿಸಿದರು. ಒಕ್ಕೂಟದ ಗೌರವ ಮುಖ್ಯ ಕಾರ್ಯನಿರ್ವಾಹಕರಾದ ಚೇತನ್‌ ಕೊಟ್ಟಾರಿ ವರದಿ ವಾಚಿಸಿ, ಲೆಕ್ಕಪತ್ರ ಮಂಡಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Annual Body Meeting Bhaskar Devasya Dakshina Kannada Okutta Souharda Sahakari Souharda Sahakari
    Previous Articleಸಹಕಾರಿ ಸಂಘಗಳಿಂದ ಸ್ವಾಭಿಮಾನದ ಬದುಕು: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ
    Next Article ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್‌ 101ನೇ ವಾರ್ಷಿಕ ಮಹಾಸಭೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.