ಬಿ.ಎನ್.ಸದಾನಂದ ಉಪಾಧ್ಯಕ್ಷರಾಗಿ ಆಯ್ಕೆ
ಮೈಸೂರು: ಸಹಕಾರ ಕ್ಷೇತ್ರದಲ್ಲಿ ತಮ್ಮ ಪ್ರಾಬಲ್ಯ ಮುಂದುವರಿಸಿರುವ ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ ಹರೀಶ್ ಗೌಡ ಮೈಸೂರು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿ ಯೂನಿಯನ್ ನಿರ್ದೇಶಕರಾಗಿ ಆಯ್ಕೆಯಾದ ಅವರು ಮೊದಲ ಆಯ್ಕೆಯಲ್ಲೇ ಅಧ್ಯಕ್ಷರಾಗಿ ಆಯ್ಕೆಯಾಗಿ ದಾಖಲೆ ಬರೆದಿದ್ದಾರೆ.
https://chat.whatsapp.com/JVAtKKe2M19AFO3W5629ZS?mode=ems_copy_t
ಇತ್ತೀಚೆಗೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಜಿ.ಡಿ ಹರೀಶ್ ಗೌಡ ಅವರನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಉಪಾಧ್ಯಕ್ಷರನ್ನಾಗಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಿ.ಎನ್ ಸದಾನಂದ ಅವರನ್ನು ಆರಿಸಲಾಯಿತು.
ನಿರ್ದೇಶಕರಾಗಿ ಶಾಸಕ ಜಿ.ಟಿ.ದೇವೇಗೌಡ, ಮುಡಾ ಮಾಜಿ ಅಧ್ಯಕ್ಷ ಹೆಜ್.ವಿ.ರಾಜೀವ್, ಕೆ.ಎಸ್.ಕುಮಾರ್, ಶಿವಗಾಮಿ, ಪ್ರಶಾಂತ್ ತಾತಾಚಾರ್, ಸೋಮಶೇಖರ್, ಕೆ.ಉಮಾಶಂಕರ್, ಎ.ಟಿ.ಸೋಮಶೇಖರ್, ಕುರಹಟ್ಟಿ ಮಹೇಶ್, ಹನಮನಾಳ ಸಿದ್ದೇಗೌಡ, ಕೆ.ಕುಮಾರ್, ಮಲ್ಲಣ್ಣ, ಬಿ.ಎನ್. ಸದಾನಂದ ಮರ್ಚಂಟ್ಸ್ ಬ್ಯಾಂಕ್ ಆನಂದ್, ಬಿ.ವಿ.ಗುರುರಾಜ್ ಸೇರಿ ಒಟ್ಟು 15 ಮಂದಿ ಆಯ್ಕೆಯಾಗಿದ್ದಾರೆ. 15 ಸದಸ್ಯರ ಪೈಕಿ ಎರಡು ಕ್ಷೇತ್ರಗಳಿಗೆ ಚುನಾವಣೆ ನಡೆದು ಉಳಿದ ಎಲ್ಲಾ ಕ್ಷೇತ್ರದಲ್ಲಿ ಅವಿರೋಧ ಆಯ್ಕೆ ನಡೆದಿತ್ತು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com











