ಸ್ವಚ್ಛತಾ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ. ಎಸ್ ಆರ್ ಹರೀಶ್ ಆಚಾರ್ಯ ಅಭಿಪ್ರಾಯ
ಕಾರ್ಕಳ: ಯಾವುದೇ ಆರ್ಥಿಕ ಸಂಸ್ಥೆಗೆ ವ್ಯಾವಹಾರಿಕ ಬದ್ಧತೆಯ ಜೊತೆಗೆ ಸಾಮಾಜಿಕ ಜವಾಬ್ದಾರಿ ಕೂಡ ಇರುತ್ತದೆ. ಈ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಿಕೊಂಡು ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸ್ವಚ್ಛ ಭಾರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಹೇಳಿದರು.
https://chat.whatsapp.com/JVAtKKe2M19AFO3W5629ZS?mode=ems_copy_t
ಅವರು ವಿಶ್ವಕರ್ಮ ಬ್ಯಾಂಕಿನ ಕಾರ್ಕಳ ಶಾಖೆಯ ವತಿಯಿಂದ ಭಾನುವಾರ “ಸ್ವಚ್ಛತಾ ಹೀ ಸೇವಾ” ಎಂಬ ಆಶಯದಂತೆ ನಡೆದ ಸ್ವಚ್ಛ ಭಾರತ ಶ್ರಮದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿಶ್ವಕರ್ಮ ಸಹಕಾರ ಬ್ಯಾಂಕ್ ಇದರ ಸ್ವರ್ಣ ಮಹೋತ್ಸವ ಪ್ರಯುಕ್ತ ಸ್ವಚ್ಛ ಪರಿಸರ ರೂಪಿಸಲು ಪ್ರತಿಯೊಬ್ಬರೂ ಭಾಗಿದಾರಿಕೆ ವಹಿಸುವ ಅಗತ್ಯವಿದೆ. ಆದುದರಿಂದ ಸ್ವಚ್ಛತೆಯ ಮೂಲಭೂತ ಕರ್ತವ್ಯಗಳಲ್ಲಿ ನಾವೆಲ್ಲರೂ ಒಂದಾಗಬೇಕಾಗಿದೆ. ನಮ್ಮ ಕಸ, ನಮ್ಮ ಜವಾಬ್ದಾರಿ ಎಂಬ ಮೂಲಮಂತ್ರವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ ಸ್ವಚ್ಛ ಕಾರ್ಕಳದ ಪ್ರಮುಖರಾದ ಪ್ರಕಾಶ್ ರಾವ್ ಮಾತನಾಡಿ ವಿಶ್ವಕರ್ಮ ಬ್ಯಾಂಕ್ ತನ್ನ ಬ್ಯಾಂಕಿಂಗ್ ಚಟುವಟಿಕೆಯ ಜೊತೆಜೊತೆಗೆ ಸ್ವಚ್ಛತೆಯಂತಹ ಪ್ರಮುಖ ಸಾಮಾಜಿಕ ಕಾರ್ಯಕ್ರಮವನ್ನು ಮುಂದಿನ ಹತ್ತು ತಿಂಗಳು ನಿರಂತರವಾಗಿ ಹಮ್ಮಿಕೊಂಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು.



ಕಾರ್ಕಳ ಅನಂತಶಯನ ದೇವಸ್ಥಾನ ಪರಿಸರದಿಂದ ನಗರದ ಬಸ್ ಸ್ಟ್ಯಾಂಡ್ ಪರಿಸರದರವರೆಗೆ ಸ್ವಚ್ಛತೆಯ ಶ್ರಮದಾನದ ಕಾರ್ಯಕ್ರಮ ಜರುಗಿತು. ರೋಟರಿ ಕ್ಲಬ್ ಅಧ್ಯಕ್ಷರಾದ ಸುರೇಂದ್ರ ನಾಯಕ್, ಚಿನ್ನ -ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷರಾದ ಎಂ ರಮೇಶ್ ಆಚಾರ್ಯ, ಲಯನ್ಸ್ ರೂರಲ್ ಇದರ ಸ್ಥಾಪಕ ಅಧ್ಯಕ್ಷರಾದ ಜ್ಯೋತಿ ರಮೇಶ್, ಕಾಳಿಕಾಂಬಾ ದೇವಸ್ಥಾನದ ಮೊಕೇಸ್ತರರಾದ ಪಿ ರವಿ ಆಚಾರ್ಯ, ಸ್ವಚ್ಛ ಬ್ರಿಗೇಡ್ ಕಾರ್ಕಳದ ಫಿಲಿಕ್ಸ್ ವಾಸ್ ಹಾಗೂ ಸದಸ್ಯರು, ವಕೀಲರ ಸಂಘ ಕಾರ್ಕಳ ಇದರ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಭುವನೇoದ್ರ ಕಾಲೇಜಿನ ಪ್ರಾಧ್ಯಾಪಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಶಂಕರ್ ಕುಡ್ವ ಹಾಗೂ ವಿದ್ಯಾರ್ಥಿಗಳು, ಜ್ಯೋತಿ ಯುವಕ ಮಂಡಲದ ಅಧ್ಯಕ್ಷರಾದ ಪ್ರಶಾಂತ್ ಹಾಗೂ ಸಂಸ್ಥೆಯ ಸದಸ್ಯರು, ಬ್ಯಾಂಕಿನ ನಿರ್ದೇಶಕರಾದ ಬಿ.ಸೀತಾರಾಮ ಆಚಾರ್, ಹರಿಪ್ರಸಾದ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ವಸಂತ ಅಡ್ಯಂತಾಯ ಹಾಗೂ ಬ್ಯಾಂಕ್ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

