ಮಂಗಳೂರು: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 24ನೇ ಶಾಖೆಯು ಕಲ್ಲಡ್ಕದಲ್ಲಿ ಅಕ್ಟೋಬರ್ 24ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
https://chat.whatsapp.com/JVAtKKe2M19AFO3W5629ZS?mode=ems_copy_t
ಕಲ್ಲಡ್ಕದ ಲಲಿತ ಎಸ್. ರಾವ್ ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟನೆ ನಡೆಯಲಿದ್ದು ಸಭಾ ಕಾರ್ಯಕ್ರಮವು ಶ್ರೀ ರಾಮ ಭಜನಾ ಮಂದಿರದ ಮಾಧವ ಸಭಾಭವನದಲ್ಲಿ ನಡೆಯಲಿದೆ. ಒಡಿಯೂರು ಮಹಾಸಂಸ್ಥಾನದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಶಾಖೆ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಸಾಧ್ವಿ ಶ್ರೀ ಮಾತಾನಂದಮಯೀ ದಿವ್ಯ ಉಪಸ್ಥಿತಿ ಇರಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರುಕ್ಮಯ ಪೂಜಾರಿ, ಬಂಟ್ವಾಳ ತಾಲೂಕು ಬಂಟವಾಳದ ಬಂಟರ ಸಂಘದ ಅಧ್ಯಕ್ಷರಾದ ಜಗನ್ನಾಥ ಚೌಟ ಬದಿಗುಡ್ಡೆ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್, ಗೇರುಕಟ್ಟೆ ಕಲ್ಲಡ್ಕದ ಉಮಾಶಿವ ಕ್ಷೇತ್ರದ ಅಧ್ಯಕ್ಷ ಈಶ್ವರ್ ಭಟ್, ದ.ಕ ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ನಂದನ್ ಬಿ.ಎನ್., ಗೋಳ್ತಮಜಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರೇಮ, ಕಲ್ಲಡ್ಕ ಲಲಿತಾ ರಾವ್ ವಾಣಿಜ್ಯ ಸಂಕೀರ್ಣದ ಮಾಲೀಕರಾದ ಲಲಿತಾ ರಾವ್, ಸುಮಂಗಲ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ನಾಗೇಶ್ ಕಲ್ಲಡ್ಕ, ಕಲ್ಲಡ್ಕ ಶ್ರೀರಾಮ ಪ್ರೌಡಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ರಾಧಾಕೃಷ್ಣ ಅಡ್ಯಂತಾಯ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಾತೇಶ್ ಭಂಡಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಎ.ಸುರೇಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ.


ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷರಾದ ಲಿಂಗಪ್ಪ ಗೌಡ ಪನೆಯಡ್ಕ, ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿ ಬಾಕ್ರಬೈಲ್, ಆಡಳಿತ ಮಂಡಳಿಯ ಸದಸ್ಯರಾದ ವೇಣುಗೋಪಾಲ ಮಾರ್ಲ ಮಂಗಳೂರು, ತಾರಾನಾಥ ಶೆಟ್ಟಿ ಒಡಿಯೂರು, ಲೋಕನಾಥ ಶೆಟ್ಟಿ ಮಂಗಳೂರು, ಗಣೇಶ್ ಅತ್ತಾವರ್, ಶಾರದಾಮಣಿ ಸುಳ್ಯ, ಸರಿತಾ ಅಶೋಕ್ ಮಂಗಳೂರು, ದೇವಪ್ಪ ನಾಯ್ಕ ಉಪ್ಪಳಿಗೆ, ಗಣಪತಿ ಭಟ್ ಸೇರಾಜೆ, ಮೋನಪ್ಪ ಪೂಜಾರಿ ಕೆರೆಮಾರು, ಸೋಮಪ್ಪ ನಾಯ್ಕ್ ಕಡಬ, ಜಯಪ್ರಕಾಶ್ ರೈ ನೂಜಿಬೈಲು, ಭವಾನಿಶಂಕರ್ ಶೆಟ್ಟಿ ಪುತ್ತೂರು, ಅಶೋಕ್ ಕುಮಾರ್ ಯು.ಎಸ್. ಬಿ.ಸಿ.ರೋಡ್, ಕರುಣಾಕರ ಜೆ.ಉಚ್ಚಿಲ್ ಪಾಲ್ಗೊಳ್ಳಲಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com





