ಮೂಲ್ಕಿ: ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಗ್ರಾಹಕರ ದಿನಾಚರಣೆ ಮಂಗಳವಾರ ಸಂಘದ ಸಭಾಭವನದಲ್ಲಿ ನಡೆಯಿತು.
ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದ ಅಭಿವೃದ್ಧಿಗೆ ಗ್ರಾಹಕರ ಸಹಕಾರ ಮುಖ್ಯವಾಗಿದ್ದು,ಅಭಿವೃದ್ಧಿ ನಿರಂತರವಾಗಿ ನಡೆಯಲಿದೆ ಎಂದರು.
ಮುಖ್ಯ ಅತಿಥಿಗಳಾಗಿ ಮೂಲ್ಕಿ ನಗರ ಪಂಚಾಯತ್ ಸದಸ್ಯ ಯೋಗೀಶ್ ಕೋಟ್ಯಾನ್ ಮಾತನಾಡಿ ಸಹಕಾರಿ ಸಂಘ ಬೆಳೆಯಲು ಮಹಿಳೆಯರ ಪಾತ್ರ ಪ್ರಮುಖವಾಗಿದ್ದು ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸಂಘವು ಗ್ರಾಹಕರ ಜೊತೆ ಉತ್ತಮ ಬಾಂಧವ್ಯದ ಮೂಲಕ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಹೇಳಿ ಶುಭ ಹಾರೈಸಿದರು.
https://chat.whatsapp.com/JVAtKKe2M19AFO3W5629ZS?mode=ems_copy_t
ಮುಕ್ಕ ಮೆಸ್ಕಾಂ ಸೆಕ್ಷನ್ ಆಫೀಸರ್ ಯಶೋಧರ್ ಸಾಲ್ಯಾನ್, ಸೊಸೈಟಿ ನಿರ್ದೇಶಕರಾದ ಉಮಾನಾಥ ಜೆ ಶೆಟ್ಟಿಗಾರ್, ಜಯಕೃಷ್ಣ ಕೋಟ್ಯಾನ್, ನವೀನ್ ಸಾಲ್ಯಾನ್, ಶಾಖಾ ಪ್ರಬಂಧಕಿ ಪ್ರಜ್ಞಾಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸ್ವಸಹಾಯ ಗುಂಪುಗಳ ಪ್ರೇರಕಿ ನಿರಂಜಲ ಪ್ರಾರ್ಥಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿದರು. ಸಾಲ ವಿಭಾಗದ ಪ್ರಬಂಧಕಿ ಅಕ್ಷತಾ ಶೆಟ್ಟಿ ನಿರೂಪಿಸಿದರು.
ಪ್ರತಿಷ್ಠಿತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಸದಸ್ಯರಾಗಿ ಹಾಗೂ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಸಹಕೋಶಾಧಿಕಾರಿಯಾಗಿ ಆಯ್ಕೆಯಾದ ಸೊಸೈಟಿ ಗ್ರಾಹಕ ಯೋಗೀಶ್ ಕೋಟ್ಯಾನ್ ಅವರನ್ನು ಗೌರವಿಸಲಾಯಿತು.

