ಹಾವೇರಿ: ಹಾವೇರಿಯಲ್ಲಿ ಮಂಗಳವಾರ ನಡೆದ ರಾಜ್ಯಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಹೆಡಿಯಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಸಹಕಾರ ಸಂಘವೆಂದು ಗುರುತಿಸಿ ಸನ್ಮಾನಿಸಲಾಯಿತು.
https://chat.whatsapp.com/JVAtKKe2M19AFO3W5629ZS?mode=ems_copy_t
ರಾಣೆಬೆನ್ನೂರು ತಾಲೂಕಿನ ಹೆಡಿಯಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಗತಿಯನ್ನು ಗುರುತಿಸಿ ಗೌರವಿಸಿದ ಕೆಸಿಸಿ ಬ್ಯಾಂಕಿನ ಅಧ್ಯಕ್ಷರಾದ ಶಿವಕುಮಾರಗೌಡ ಎಸ್.ಪಾಟೀಲ, ನಿರ್ದೇಶಕರಾದ ಮಳ್ಳಪ್ಪ ಗೂ. ನಿಂಗಜ್ಜನವರ, ತಿರುಪತಿ ಅಜ್ಜನವರ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಿವಾನಂದ ಹ ಸಂಗಾಪುರ, ಕೆಸಿಸಿ ಬ್ಯಾಂಕ್ ನೌಕರ ವರ್ಗದವರು ಹಾಗೂ ಹಾವೇರಿ ಜಿಲ್ಲೆಯ ಸಹಕಾರ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಹೆಡಿಯಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ರುದ್ರಪ್ಪ ಬರಮಪ್ಪ ತೋಟಿಗೇರ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರುದ್ರಪ್ಪ ಮಾರೇರ ಪ್ರಶಸ್ತಿ ಸ್ವೀಕರಿಸಿದರು.


