ಮೈಸೂರು: ಮೈಸೂರಿನ ಜಯನಗರದಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಪ್ತರ್ಷಿ ಸೌಹಾರ್ದ ಸಹಕಾರಿ ಸಂಘದಲ್ಲಿ ಸೋಮವಾರ ಸಂಘದ ದಿನಚರಿ ಪಂಚಾಂಗ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
https://chat.whatsapp.com/JVAtKKe2M19AFO3W5629ZS?mode=ems_copy_t
ಸಂಘದ ಅಧ್ಯಕ್ಷರಾದ ಎಂ.ಎಸ್.ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿದ್ದ ಸನ್ನದು ಲೆಕ್ಕಪರಿಶೋಧಕರಾದ ಕೆ.ಎಸ್.ಸದಾಶಿವ ಇವರು 2026ನೇ ಸಾಲಿನ ಸಹಕಾರಿಯ ದಿನಚರಿ ಪಂಚಾಂಗವನ್ನು ಬಿಡುಗಡೆ ಮಾಡಿದರು. ಸಹಕಾರಿಯ ಉಪಾಧ್ಯಕ್ಷರಾದ ಎಸ್.ಶ್ಯಾಮಲಾ, ಗೌರವ ಖಜಾಂಚಿಗಳಾದ ಕೃಷ್ಣವೇಣಿ ಎಂ.ಜಿ, ಮಾಜಿ ಕಾರ್ಪೊರೇಟರ್ ಮತ್ತು ಕೃಷ್ಣರಾಜೇಂದ್ರ ಕೋ-ಆಪರೇಟಿವ್ ಬ್ಯಾಂಕ್ನ ಹಾಲಿ ನಿರ್ದೇಶಕರಾದ ಪಾರ್ಥಸಾರಥಿ, ಸಹಕಾರಿಯ ನಿರ್ದೇಶಕರುಗಳು, ಸದಸ್ಯರು, ಕಾನೂನು ಸಲಹೆಗಾರರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು. ಈ ಸಂದರ್ಭದಲ್ಲಿ ಸಹಕಾರಿಯ ಸ್ಥಾಪಕ ಅಧ್ಯಕ್ಷರಾದ ಬಿ.ಎಸ್.ನಾಗರಾಜರಾವ್ ಅವರ ಪುತ್ಥಳಿಗೆ ಹಾರ ಹಾಕಿ ಸ್ಮರಿಸಲಾಯಿತು.

ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


