Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಅಡಕೆಗೆ ಎಲೆಚುಕ್ಕೆ ರೋಗ ಬಾಧೆ; ಬೆಳೆಗಾರರಿಗೆ ನಷ್ಟ ಪರಿಹಾರ ನೀಡಲು ಮನವಿ
    News

    ಅಡಕೆಗೆ ಎಲೆಚುಕ್ಕೆ ರೋಗ ಬಾಧೆ; ಬೆಳೆಗಾರರಿಗೆ ನಷ್ಟ ಪರಿಹಾರ ನೀಡಲು ಮನವಿ

    adminBy adminDecember 30, 2025

    ಬಂಟ್ವಾಳ: ಕರಾವಳಿ ಜಿಲ್ಲೆಗಳ ಬಹುತೇಕ ಅಡಕೆ ಮರಗಳಿಗೆ ಎಲೆಚುಕ್ಕೆ ರೋಗ ಬಾಧಿಸಿದ್ದು ಇದನ್ನೇ ನಂಬಿಕೊಂಡಿರುವ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ರೈತರು ಬ್ಯಾಂಕ್‌ಗಳಲ್ಲಿ ಸಾಲ ಮಾಡಿದ ಹಣ ತೀರಿಸಲಾಗದೆ ಪರದಾಡುತ್ತಿದ್ದು, ಇಂಥ ಸಂಕಷ್ಟ ಸ್ಥಿತಿಯಲ್ಲಿರುವ ರೈತರಿಗೆ ಸರಕಾರ ನಷ್ಟ ಪರಿಹಾರ ಒದಗಿಸಿಕೊಡಬೇಕು ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಮನವಿ ಮಾಡಿದ್ದಾರೆ.

    https://chat.whatsapp.com/FCEnlTkAKCC0MGPhXtX4i4
    ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಗಳ ರೈತರ ಪ್ರಮುಖ ಬೆಳೆಯಾದ ಅಡಕೆ ಮರಗಳಿಗೆ ಎಲೆಚುಕ್ಕೆ ರೋಗವು ಕಾಣಿಸಿಕೊಂಡಿದ್ದು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದೆ. ಸಾವಿರಾರು ಅಡಕೆ ಮರಗಳು ಸಾಯುತ್ತಿದ್ದು, ಅಡಕೆ ಇಳುವರಿ ಸಹ ಗಣನೀಯವಾಗಿ ಇಳಿಮುಖವಾಗಿದೆ. ಈ ವರ್ಷ ನಿರಂತರವಾಗಿ ಸುರಿದ ಮಳೆಯ ಪ್ರಭಾವದಿಂದ ಕೊಳೆರೋಗದಿಂದಾಗಿ ಕಂಗೆಟ್ಟಿರುವ ಅಡಕೆ ಬೆಳೆಗಾರರಿಗೆ ಎಲೆಚುಕ್ಕೆ ರೋಗದಿಂದಾಗಿ ಅಡಕೆ ಮರಗಳೇ ಸಾಯುತ್ತಿರುವ ಪರಿಸ್ಥಿತಿಯಲ್ಲಿ ಅಡಕೆ ಬೆಳೆಗಾರರು ಪರ್ಯಾಯ ಮಾರ್ಗವಿಲ್ಲದೆ ಚಿಂತೆಯಲ್ಲಿ ತೊಡಗಿದ್ದಾರೆ. ಕರಾವಳಿ ಜಿಲ್ಲೆಗಳ ಬಹುತೇಕ ಆರ್ಥಿಕ ವ್ಯವಹಾರವು ಅಡಕೆ ಬೆಳೆಗಾರರಿಂದಲೇ ಅವಲಂಬಿತವಾಗಿದ್ದು, ಅಡಿಕೆ ಬೆಳೆಯನ್ನೇ ನಂಬಿರುವ ರೈತರು ಬ್ಯಾಂಕ್ ಗಳಲ್ಲಿ ಸಾಲ ಮಾಡಿದ ಹಣವನ್ನು ಕೃಷಿಗೋಸ್ಕರ ವಿನಿಯೋಗಿಸಿದ್ದು ಈ ಸಂಕಷ್ಟ ಪರಿಸ್ಥಿತಿಯಲ್ಲಿ ಸಾಲ ಮರುಪಾವತಿ ಮಾಡಲು ರೈತರಿಗೆ ಕಷ್ಟವಾಗುತ್ತಿದೆ.
    ಈ ನಿಟ್ಟಿನಲ್ಲಿ ಸರಕಾರದ ವತಿಯಿಂದ ಅಡಕೆ ತೋಟ ಸಮೀಕ್ಷೆ ನಡೆಸಿ ತೋಟಗಾರಿಕೆ ಬೆಳೆ ಸಂಬಂಧವಾಗಿ ಪಡೆದಿರುವ ಬೆಳೆ ಸಾಲವನ್ನು ಮನ್ನಾ ಮಾಡಬೇಕು ಹಾಗೂ ಎಲೆಚುಕ್ಕೆ ರೋಗಕ್ಕೆ ತುತ್ತಾದ ಪ್ರತಿ ಅಡಕೆ ಮರಕ್ಕೆ ಕನಿಷ್ಠ 5 ಸಾವಿರದಂತೆ ಪರಿಹಾರ ನೀಡುವಂತೆ ಅವರು ಸರಕಾರವನ್ನು ಆಗ್ರಹಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Adake bele Areca nut Prabhakara Prabhu Siddakatte Prathimika Krishi Pattina Sahakara Sangha
    Previous Articleಭಾರತ್‌ ಸಹಕಾರಿ ಟ್ಯಾಕ್ಸಿ ಜನವರಿ 1ರಿಂದ ಕಾರ್ಯಾರಂಭ
    Next Article 16 ಕೋಟಿ ದಾಟಿದ ಪ್ಯಾಕ್ಸ್‌ ಸದಸ್ಯತ್ವ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.