ಅವೇಕ್ ಕುಡ್ಲ ಸಂಚಾಲಕ ಉಮಾನಾಥ್ ಕೋಟೆಕಾರ್ ಅಭಿಪ್ರಾಯ
ಮಂಗಳೂರು: ಕಸ ಎಸೆಯುವ ಮನಸ್ಥಿತಿ ಬದಲಾಯಿಸಬೇಕಾದರೆ ಸಾರ್ವಜನಿಕವಾಗಿ ಕಸ ಹೆಕ್ಕುವ ಸಂಪ್ರದಾಯ ಮೂಡಿ ಅದು ಸಾರ್ವತ್ರಿಕವಾಗಬೇಕು. ಪೋಷಕರು ಪ್ರತಿ ಮನೆಗಳಲ್ಲೂ ಮಕ್ಕಳಿಗೆ ಸಣ್ಣ ಪ್ರಾಯದಲ್ಲಿ ಸ್ವಚ್ಛತೆಯ ಅರಿವು ಮೂಡಿಸುವ ಕಾರ್ಯ ಮಾಡಬೇಕಾಗಿದೆ. ಆ ಮೂಲಕ ಮುಂದಿನ ಜಾಗೃತ ಸಮಾಜವನ್ನು ನಿರ್ಮಾಣ ಮಾಡಬೇಕು ಎಂದು ಅವೇಕ್ ಕುಡ್ಲ ಸಂಚಾಲಕರಾದ ಉಮಾನಾಥ್ ಕೋಟೆಕಾರ್ ಹೇಳಿದರು.
https://chat.whatsapp.com/FCEnlTkAKCC0MGPhXtX4i4
ವಿಶ್ವಕರ್ಮ ಸಹಕಾರ ಬ್ಯಾಂಕಿನ ಮಂಗಳೂರು ಶಾಖೆಯ ಆಶ್ರಯದಲ್ಲಿ “ಸ್ವಚ್ಛತಾ ಹೀ ಸೇವಾ” ಧ್ಯೇಯದೊಂದಿಗೆ ನಡೆದ ಹದಿನಾರನೇ ಸ್ವಚ್ಛ ಭಾರತ ಶ್ರಮದಾನದಲ್ಲಿ ಭಾಗವಹಿಸಿದ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿಡದರು.
ಪತ್ರಕರ್ತ ಗುರುಪ್ರಸಾದ್ ಎಸ್ ಮಾತನಾಡಿ, ನಾಗರಿಕ ಸಮಾಜದಲ್ಲಿ ಸ್ವಚ್ಛತೆಯ ಪರಿಪಾಠವೂ ನಮ್ಮ ಮನೆ, ಮನದಾಳದಿಂದ ಮೂಡಬೇಕು, ಈ ನಿಟ್ಟಿನಲ್ಲಿ ಪ್ರತೀ ಮನೆಗಳಂತೆ ಸಂಘ ಸಂಸ್ಥೆಗಳೂ ಜವಾಬ್ದಾರಿಯುತ ಪಾತ್ರವನ್ನು ಹೊಂದಿರುತ್ತದೆ. ಈ ಹಿನ್ನಲೆಯಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ಒಂದು ಉತ್ತಮ ಉದಾಹರಣೆ ಎಂದು ಅಭಿಪ್ರಾಯಪಟ್ಟರು.
ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಸ್. ಆರ್. ಹರೀಶ್ ಆಚಾರ್ಯ, ಮಂಗಳೂರು ಮಹಾನಗರ ಪಾಲಿಕೆಯ ಮರೋಳಿ ವಾರ್ಡ್ನ ನಿಕಟಪೂರ್ವ ಸದಸ್ಯ ಕೇಶವ ಮರೋಳಿ, ಯಮುನಾ ರೆಸಿಡೆನ್ಸಿ ಕಟ್ಟಡ ಮಾಲೀಕರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ, ಎಸ್.ಸಿ. ವರ್ಮ ಇವರುಗಳು ಹಸಿರು ನಿಶಾನೆ ತೋರುವ ಮೂಲಕ ಶ್ರಮದಾನಕ್ಕೆ ಚಾಲನೆ ನೀಡಿದರು.



ಬಳಿಕ ಮರೋಳಿಯ ಬಾಕಿಮಾರು ಜುಂಕ್ಷನ್, ಯಮುನಾ ರೆಸಿಡೆನ್ಸಿ, ಸೂರ್ಯನಾರಾಯಣ ದೇವಸ್ಥಾನ ರಸ್ತೆ, ಜಯನಗರ ರಸ್ತೆ ಪರಿಸರಗಳಲ್ಲಿ ಸ್ವಚ್ಛತಾ ಶ್ರಮದಾನ ಜರುಗಿತು. ವಿಶ್ವಕರ್ಮ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಹರಿಪ್ರಸಾದ್, ವ್ಯವಸ್ಥಾಪಕ ನಿರ್ದೇಶಕರಾದ ವಸಂತ ಅಡ್ಯಂತಾಯ, ದಕ್ಷಿಣ ಕನ್ನಡ ಚಿನ್ನದ ಕೆಲಸಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಹಳೇಜಿ, ಸಾಮಾಜಿಕ ಕಾರ್ಯಕರ್ತ ಅರುಣ್ ಶೆಟ್ಟಿ ಮರೋಳಿ, ಭಾಸ್ಕರ ದೇವಾಡಿಗ, ರಂಜಿತ್, ಯಮುನಾ ರೆಸಿಡೆನ್ಸಿ ಕಟ್ಟಡ ಮಾಲಕರ ಸಂಘದ ಪದಾಧಿಕಾರಿಗಳಾದ ರಾಧಾಕೃಷ್ಣ ರೈ, ಸಂಜೀವ ರೈ, ಪುರಂದರ ಶೆಟ್ಟಿ, ಡಾ.ಮಹೇಶ್ ಶೇಣವ, ಮಂಜುನಾಥ್ ಕುಲಕರ್ಣಿ, ಬಾಲಕೃಷ್ಣ ಶೆಟ್ಟಿ, ವಾಣಿ ರೈ, ಮಮತಾ ರೋಹಿತ್ ರಾಜ್ ಮತ್ತಿತರರು, ಕರಸೇವಾ ಬಳಗ ಶ್ರೀ ಸೂರ್ಯನಾರಾಯಣ ದೇವಸ್ಥಾನ ಮರೋಳಿ, ಹಿಂದೂ ಯುವ ಸೇನೆ ಸೂರ್ಯನಾರಾಯಣ ಶಾಖೆ, ಮರೋಳಿ ಯುವಕ ಮಂಡಳ, ವಿಶ್ವ ಹಿಂದೂ ಪರಿಷತ್, ಭಜರಂಗ ದಳ ಅಭಿಮನ್ಯು ಶಾಖೆ ಇದರ ಕಾರ್ಯಕರ್ತರು, ಬ್ಯಾಂಕಿನ ಸದಸ್ಯರು, ಗ್ರಾಹಕರು ಹಾಗೂ ಸಿಬ್ಬಂದಿಗಳು ಸ್ವಯಂಸೇವಕರಾಗಿ ಸಹಕರಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com

