ಬಂಟ್ವಾಳ: ಇಲ್ಲಿನ ಬಿ.ಸಿ. ರೋಡ್ ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ನಿ. ವತಿಯಿಂದ ಸಹಕಾರಿಯ ಪಿಗ್ಮಿ ಗ್ರಾಹಕರಿಗೋಸ್ಕರ ಉಚಿತ ಚಿನ್ನ ಮತ್ತು ಬೆಳ್ಳಿಯ ನಾಣ್ಯ ಗೆಲ್ಲುವ ಅವಕಾಶ ಮಾಡಿಕೊಡಲಾಗಿದೆ. ಇದರಲ್ಲಿ ಪ್ರಥಮವಾಗಿ ಬಿ.ಸಿ.ರೋಡ್ ನ ಹೋಟೆಲ್ ಉದ್ಯಮಿಗಳಾದ ನಾಗ ಕ್ಯಾಂಟೀನ್ ಮಾಲಕರಾದ ಗುರುದತ್ ಹೆಗಡೆ ಇವರು ಬೆಳ್ಳಿಯ ನಾಣ್ಯ ಅದೃಷ್ಟ ಗೆದ್ದುಕೊಂಡಿದ್ದಾರೆ.
https://chat.whatsapp.com/FCEnlTkAKCC0MGPhXtX4i4
ಇವರಿಗೆ ಶರ್ವಾಣಿ ಕ್ರೆಡಿಟ್ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ವೆಂಕಟೇಶ್ ಭಟ್ ಇವರು ಬೆಳ್ಳಿಯ ನಾಣ್ಯವನ್ನು ನೀಡಿದರು. ಜೊತೆಯಲ್ಲಿ ಸಹಕಾರಿಯ ಪಿಗ್ಮಿ ಸಂಗ್ರಹಕರಾದ ರೇಖಾ ಪ್ರಭು ಇದ್ದರು.

