ಬಂಟ್ವಾಳ: ಒಡಿಯೂರು ಶ್ರೀವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಒಡಿಯೂರು ಬಂಟ್ವಾಳ ತಾಲೂಕು ಇದರ 2026-2031ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಎ.ಸುರೇಶ್ ರೈ, ಉಪಾಧ್ಯಕ್ಷರಾಗಿ ಲಿಂಗಪ್ಪ ಗೌಡ ಪನೆಯಡ್ಕ ಪುನರಾಯ್ಕೆಯಾಗಿದ್ದಾರೆ.
https://chat.whatsapp.com/FCEnlTkAKCC0MGPhXtX4i4
ಆಡಳಿತ ಮಂಡಳಿ ನಿರ್ದೇಶಕರಾಗಿ ವೇಣುಗೋಪಾಲ ಮಾರ್ಲ, ಲೋಕನಾಥ ಜಿ. ಶೆಟ್ಟಿ ತಾಳಿಪ್ಪಾಡಿಗುತ್ತು, ಗಣಪತಿ ಭಟ್ ಸೇರಾಜೆ, ಕೆ.ಸೋಮಪ್ಪ ನಾಯ್ಕ್, ಕೆ.ಮೋನಪ್ಪ ಪೂಜಾರಿ, ಎನ್.ಜಯಪ್ರಕಾಶ್ ರೈ, ಅಶೋಕ್ ಕುಮಾರ್ ಯು.ಎಸ್, ಕರುಣಾಕರ ಜೆ.ಉಚ್ಚಿಲ್, ತಾರಾನಾಥ ಶೆಟ್ಟಿ, ಗಣೇಶ್, ಭವಾನಿಶಂಕರ ಶೆಟ್ಟಿ, ಶಾರದಾಮಣಿ ರೈ, ಸರಿತಾ ಅಶೋಕ್, ದೇವಪ್ಪ ನಾಯ್ಕ ಯು. ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ರಿಟರ್ನಿಂಗ್ ಅಧಿಕಾರಿಯಾಗಿದ್ದ ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಜೆ.ಸುಧೀರ್ ಕುಮಾರ್ ನಡೆಸಿಕೊಟ್ಟರು. ಮಂಗಳೂರಿನ ಸಹಕಾರ ಸಂಘಗಳ ಉಪ ನಿಬಂಧಕರ ಕಛೇರಿಯ ಅಧೀಕ್ಷಕ ಎನ್.ಜೆ. ಗೋಪಾಲ ಇವರು ಸಹಕರಿಸಿದರು. ಒಡಿಯೂರು ಶ್ರೀವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿ ಬಾಕ್ರಬೈಲ್ ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com




