ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ. ಎಸ್. ಆರ್. ಹರೀಶ್ ಆಚಾರ್ಯ ಅಭಿಪ್ರಾಯ
ಬಂಟ್ವಾಳ: ಸ್ವಚ್ಛ ಸಮಾಜದ ನಿರ್ಮಾಣವು ಜನರ ಸಾಮೂಹಿಕ ಭಾಗವಹಿಸುವಿಕೆಯಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ಸಮಾಜದಲ್ಲಿ ಜಾಗೃತಿ ಉಂಟು ಮಾಡುವಲ್ಲಿ ಸ್ವಯಂಸೇವಾ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವಪೂರ್ಣದ್ದಾಗಿದೆ ಎಂದು ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಎಸ್. ಆರ್. ಹರೀಶ್ ಆಚಾರ್ಯ ಹೇಳಿದರು.
https://chat.whatsapp.com/FCEnlTkAKCC0MGPhXtX4i4
ವಿಶ್ವಕರ್ಮ ಸಹಕಾರ ಬ್ಯಾಂಕಿನ ಮೆಲ್ಕಾರ್ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಧ್ಯೇಯದೊಂದಿಗೆ ಭಾನುವಾರ ನಡೆದ 29ನೇ ಸ್ವಚ್ಛ ಭಾರತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಕೊಡಿಮಜಲು, ಪ್ರೇರಣಾ ಮಹಿಳಾ ಮಂಡಳಿ ಅಧ್ಯಕ್ಷೆ ವನಿತಾ ಹಸಿರು ನಿಶಾನೆ ತೋರಿಸುವ ಮೂಲಕ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.






ಮೊಗರ್ನಾಡು ಹಾಗೂ ಮಾರುತಿನಗರ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಚತಾ ಶ್ರಮದಾನವು ನಡೆಯಿತು.
ವಿಶ್ವಕರ್ಮ ಬ್ಯಾಂಕಿನ ನಿರ್ದೇಶಕರಾದ ಜಯಪ್ರಕಾಶ್ ಭಂಡಾರಿಬೆಟ್ಟು, ಯುವ ಸಂಗಮ ಮೆಲ್ಕಾರ್ ಇದರ ಗೌರವಾಧ್ಯಕ್ಷ ಎಂ.ಎನ್. ಕುಮಾರ್, ವೀರಮಾರುತಿ ವ್ಯಾಯಾಮ ಶಾಲೆ ಮಾರುತಿನಗರ ಇದರ ಅಧ್ಯಕ್ಷ ಉಮೇಶ್ ಕೋಡಿಮಜಲು ಹಾಗೂ ಸದಸ್ಯರು, ಪ್ರೇರಣಾ ಮಹಿಳಾ ಮಂಡಳಿ ಇದರ ಸದಸ್ಯರು, ಶಾಖಾ ವ್ಯವಸ್ಥಾಪಕರಾದ ಉಷಾ ಕೆ ಹಾಗೂ ಸಿಬ್ಬಂದಿಗಳು, ಬ್ಯಾಂಕಿನ ಸದಸ್ಯರು, ಗ್ರಾಹಕರು ಸ್ವಯಂಸೇವಕರಾಗಿ ಭಾಗವಹಿಸಿ ಕಾರ್ಯಕ್ರಮದಲ್ಲಿ ಸಹಕರಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

