ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 18ನೇ ಶಿರ್ತಾಡಿ ಶಾಖೆಯು ಶಿರ್ತಾಡಿ ಮಕ್ಕಿ ಹೈಸ್ಕೂಲ್ ರಸ್ತೆಯಲ್ಲಿ ಮೇ 3ರಂದು ಬೆಳಗ್ಗೆ 10ಕ್ಕೆ ಶುಭಾರಂಭಗೊಳ್ಳಲಿದೆ.
https://chat.whatsapp.com/FCEnlTkAKCC0MGPhXtX4i4
ಶಾಖೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸುವರು. ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸುವರು. ಶಾಸಕ ಉಮಾನಾಥ ಕೋಟ್ಯಾನ್ ದೀಪ ಪ್ರಜ್ವಲಿಸುವರು. ಭದ್ರತಾ ಕೋಶವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸುವರು. ಠೇವಣೆ ಪತ್ರವನ್ನು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಬಿಡುಗಡೆಗೊಳಿಸುವರು.
ಪ್ರಮುಖರಾದ ಸೋಮನಾಥ ಶಾಂತಿ, ಪಿ.ಕೆ.ರಾಜು ಪೂಜಾರಿ ಕಾಶಿಪಟ್ಣ, ಸಂಪತ್ ಸಾಮ್ರಾಜ್ಯ, ಫೆಡ್ರಿಕ್ ಪಿಂಟೋ, ಸತೀಶ್ ವಿ.ಶೆಟ್ಟಿ, ಪ್ರವೀಣ್ ಕುಮಾರ್ ಜೈನ್, ಜಯಂತ್ ಕೋಟ್ಯಾನ್, ರತ್ನಾಕರ ಬುಣ್ಣನ್, ಮಹಮ್ಮದ್ ದೋಣಿಬಾಗಿಲು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ, ಉಪಾಧ್ಯಕ್ಷ ವಿಟ್ಟಲ ಬೆಳ್ಳಾಡ ಚೇಳೂರು, ನಿರ್ದೇಶಕರಾದ ಸುಂದರ ಪೂಜಾರಿ ಬೀಡಿನಪಾಲು, ರಮೇಶ್ ಅನ್ನಪ್ಪಾಡಿ, ಗಿರೀಶ್ ಕುಮಾರ್ ಪೆರ್ವ, ಜಯಶಂಕರ್ ಕಾನ್ಸಾಲೆ, ಕೆ.ಸುಜಾತಾ ಎಂ., ವಾಣಿವಸಂತ, ಆಶಿಶ್ ಪೂಜಾರಿ, ಚಿದಾನಂದ ಎಂ.ಕಡೇಶ್ವಾಲ್ಯ, ಎಂ.ಕೆ.ಪ್ರಸಾದ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಮಮತಾ ಜಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com





