ಬೆಂಗಳೂರು: ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಬ್ಯಾಂಕುಗಳಲ್ಲಿ ಒಂದಾದ ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕ್ 2025-26ನೇ ಸಾಲಿನಲ್ಲಿ ಒಟ್ಟು ರೂ 1.17 ಕೋಟಿ ಲಾಭ ಗಳಿಸಿದೆ.
https://chat.whatsapp.com/FCEnlTkAKCC0MGPhXtX4i4
ಬ್ಯಾಂಕಿನ ಅಧ್ಯಕ್ಷರಾದ ನಂಜೇಗೌಡರವರು ಈ ಬಗ್ಗೆ ಮಾಹಿತಿ ನೀಡಿದ್ದು, 31 ಮಾರ್ಚ್ 2026ರ ಅಂತ್ಯಕ್ಕೆ ಬ್ಯಾಂಕಿನ ಒಟ್ಟು ಠೇವಣಿ ರೂ 100 ಕೋಟಿ ದಾಟಿದ್ದು, ಒಟ್ಟು ಸಾಲ ರೂ 69.35 ಕೋಟಿ ಇದೆ. ಇದೆಲ್ಲ ಬ್ಯಾಂಕಿನ ಆಡಳಿತ ಮಂಡಳಿ, ಬ್ಯಾಂಕಿನ ಸಿಬ್ಬಂದಿಗಳ ಪ್ರರಿಶ್ರಮ ಹಾಗು ಸದಸ್ಯರು, ಗ್ರಾಹಕರು ಬ್ಯಾಂಕಿನ ಮೇಲೆ ಇಟ್ಟಿರುವ ನಂಬಿಕೆಯಿಂದ ಮಾತ್ರ ಸಾಧ್ಯವಾಗಿದೆ ಎಂದು ತಿಳಿಸಿದರು. ಬ್ಯಾಂಕು ಸುಮಾರು 54 ವರ್ಷಗಳಿಂದ ತನ್ನ ಸದಸ್ಯರಿಗೆ ಹಾಗೂ ಗ್ರಾಹಕರಿಗೆ ಹಲವು ಸೇವೆಗಳನ್ನು ನೀಡುತ್ತ ಬಂದಿದೆ. ಬ್ಯಾಂಕು ಈಗಾಗಲೇ ಮೂರು ಶಾಖೆಗಳನ್ನು ಹೊಂದಿದ್ದು ಸದಸ್ಯರು ಹಾಗೂ ಗ್ರಾಹಕರಿಗೆ ಇನ್ನು ಹೆಚ್ಚಿನ ಸೇವೆ ಒದಗಿಸಲು ಮತ್ತೊಂದು ಶಾಖೆಯನ್ನು ತೆರೆಯುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಕಾರ್ಯಪ್ರವೃತವಾಗಿದೆ ಎಂದು ತಿಳಿಸಿದರು. ಉಪಾಧ್ಯಕ್ಷರಾದ ಸಿ.ಎಚ್ ಶ್ರೀನಿವಾಸ್ ಜೊತೆಗಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com




