ಮಂಗಳೂರು: ಕೇರಳದ ಶಿವಗಿರಿಯ ಶ್ರೀ ನಾರಾಯಣ ಗುರು ಧರ್ಮ ಸಂಘ ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ, ಪದ್ಮಶ್ರೀ ಪುರಸ್ಕೃತ ಪರಮಪೂಜ್ಯ ಶ್ರೀ ವಿಶುದ್ಧಾನಂದ ಸ್ವಾಮೀಜಿಯವರು ಮಂಗಳವಾರ ಆತ್ಮಶಕ್ತಿ ಸಹಕಾರ ಸಂಘದ ಪ್ರಧಾನ ಕಚೇರಿಗೆ ಭೇಟಿ ನೀಡಿದರು.
https://chat.whatsapp.com/FCEnlTkAKCC0MGPhXtX4i4
ಕೇರಳದ ಅಲಪುಳ ಜಿಲ್ಲೆಯ ಕಾಯಂಕುಳಂ ಮಠದ (ಶಿವಗಿರಿ ಮಠದ ಶಾಖೆ) ತಮ್ಮ 45ಕ್ಕೂ ಮಿಕ್ಕಿ ಅನುಯಾಯಿಗಳೊಂದಿಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಚೇರಿ ಪಡೀಲ್ನಲ್ಲಿರುವ ಆತ್ಮಶಕ್ತಿ ಸೌಧಕ್ಕೆ ಅವರು ಭೇಟಿ ನೀಡಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಸಂಘದ ವತಿಯಿಂದ ವಿಶುದ್ಧಾನಂದ ಸ್ವಾಮೀಜಿಯವರನ್ನು ಸತ್ಕರಿಸಿ, ಗೌರವಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಹಾಯಕ ಪ್ರಬಂಧಕ ವಿಶ್ವನಾಥ, ಹಿರಿಯ ಶಾಖಾಧಿಕಾರಿ ಹರಿಣಾಕ್ಷಿ ಪ್ರಶಾಂತ್, ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ ಮಂಗಳೂರು ಇದರ ವ್ಯವಸ್ಥಾಪಕ ಟ್ರಸ್ಟಿರಾಮಚಂದ್ರ ಪೂಜಾರಿ ದೇರೆಬೈಲ್ ಮತ್ತಿತರರು ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com


