Close Menu
    Top News

    ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಾಣ

    May 29, 2026

    ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅಭಿವೃದ್ಧಿಯಲ್ಲಿ ಜಿಲ್ಲೆ, ರಾಜ್ಯಕ್ಕೆ ಮಾದರಿ

    May 29, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವ

    May 29, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅಭಿವೃದ್ಧಿಯಲ್ಲಿ ಜಿಲ್ಲೆ, ರಾಜ್ಯಕ್ಕೆ ಮಾದರಿ
    News

    ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅಭಿವೃದ್ಧಿಯಲ್ಲಿ ಜಿಲ್ಲೆ, ರಾಜ್ಯಕ್ಕೆ ಮಾದರಿ

    adminBy adminMay 29, 2026

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಭಿಪ್ರಾಯ

    ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಸಂಘಗಳ ಪೈಕಿ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸರಕಾರದಿಂದ ಅತಿ ಹೆಚ್ಚು ಅನುದಾನ ತಂದು ಅಭಿವೃದ್ಧಿಪಡಿಸಿದ ಕೀರ್ತಿ ಸಂಘದ ಅಧ್ಯಕ್ಷ ರಮೇಶ್ ಭಟ್ ಉಪ್ಪಂಗಳ ಅವರಿಗೆ ಸಲ್ಲುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು.

    https://chat.whatsapp.com/FCEnlTkAKCC0MGPhXtX4i4
    ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಹಳೆನೇರೆಂಕಿ ಶಾಖಾ ಕಛೇರಿ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

    ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅಭಿವೃದ್ಧಿಯಲ್ಲಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಮಾದರಿಯಾಗಿದೆ. ಹಲವಾರು ವರ್ಷಗಳಿಂದ ನಿರಂತರವಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ ಪಡೆಯುತ್ತ ಬಂದಿದೆ. ಪುತ್ತೂರು ತಾಲೂಕಿನಲ್ಲಿ ಪ್ರಥಮವಾಗಿ ರಾಜ್ಯ ಅಪೆಕ್ಸ್ ಬ್ಯಾಂಕಿನ ಪ್ರಶಸ್ತಿ ಪಡೆದ ಸಂಘ ಆಲಂಕಾರು ಕೃಷಿ ಪತ್ತಿನ ಸಹಕಾರಿ ಸಂಘ. ಈ ಸಂಘದ ಪ್ರಧಾನ ಕಛೇರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಂಘದ ಕಚೇರಿಯಂತೆ ಎಲ್ಲಾ ಸೌಲಭ್ಯವನ್ನು ಹೊಂದಿದೆ. ಸಂಘದ ಅಧ್ಯಕ್ಷ ರಮೇಶ್ ಭಟ್ ಉಪ್ಪಂಗಳ ಅಭಿವೃದ್ಧಿಗಾಗಿ ಸರಕಾರದಿಂದ ಅತೀ ಹೆಚ್ಚು ಅನುದಾನ ತರುವುದರೊಂದಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಕೂಡ ಹೆಚ್ಚು ಅನುದಾನ ಪಡೆದು ಸದ್ಭಳಕೆ ಮಾಡಿ ಸಂಸ್ಥೆಯನ್ನು ಬೆಳಗಿಸುವ ಕಾರ್ಯ ಮಾಡಿದ್ದಾರೆ. ಹಾಗಾಗಿ ಇದೊಂದು ಪ್ರತಿಷ್ಠಿತ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದರು.
    ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ರಮೇಶ್ ಭಟ್ ಉಪ್ಪಂಗಳ ಮಾತನಾಡಿ, ಹಳೆನೇರೆಂಕಿ ಭಾಗದ ಸದಸ್ಯರು ಸಂಘದ ಶಾಖೆಗೆ ಸ್ವಂತ ಕಟ್ಟಡ ನಿರ್ಮಾಣವಾಗಬೇಕು ಎಂದು ಬಹಳ ವರ್ಷದಿಂದ ಬೇಡಿಕೆ ಸಲ್ಲಿಸುತ್ತ ಬಂದಿದ್ದಾರೆ. ಆದರೆ ಇಲ್ಲಿ ನಿವೇಶನದ ಕೊರತೆ ಇತ್ತು. ಅದು ನಿವಾರಣೆಯಾಗಿ ಇದೀಗ ನೂತನ ಕಟ್ಟಡ ನಿರ್ಮಾಣವಾಗಿದೆ. ಅದರಲ್ಲಿದ್ದ ಸಮಸ್ಯೆಗಳನ್ನು ನಿವಾಸಿಕೊಂಡು ಇದೀಗ ಲೋಕಾರ್ಪಣೆ ಮಾಡಲಾಗಿದೆ. ಇಲ್ಲಿ ಬ್ಯಾಂಕಿಂಗ್ ವ್ಯವಹಾರದಲ್ಲೇ ಲಾಭದಾಯಕವಾಗಿ ಮಾಡಲು ಸಾಧ್ಯವಿಲ್ಲ, ಹಾಗಾಗಿ ಶಾಖೆಯಲ್ಲಿ ಬೇರೆ ವ್ಯವಹಾರವನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಚಿಂತಿಸಲಾಗುತ್ತಿದೆ. ಇದಕ್ಕೆ ಎಲ್ಲಾ ರೈತಾಪಿ ವರ್ಗದ ಸಹಕಾರ ಬೇಕು ಎಂದು ಮನವಿ ಮಾಡಿದರು.
    ಪುತ್ತೂರು ಮಾಸ್ಟರ್ ಪ್ಲಾನರಿಯ ಮಾಲೀಕ ಆನಂದ ಎಸ್.ಕೆ. ಮುಖ್ಯ ಅತಿಥಿಯಾಗಿದ್ದರು. ದಕ್ಷಿಣ ಕನ್ನಡ ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕಿನ ಮೇಲ್ವಿಚಾರಕ ಶರತ್ ಡಿ, ಸಂಘದ ನಿರ್ದೇಶಕರಾದ ಕೇಶವ ಗೌಡ ಆಲಡ್ಕ, ಅಶೋಕ್ ಕೊಯಿಲ, ಅಶೋಕ್ ಎಚ್, ರತ್ನಾ ಬಿ.ಕೆ., ವಿಜಯ ಎಸ್ ಅಂಬಾ, ಗಾಯತ್ರಿ ಸುರೇಶ್, ಉದಯ ಸಾಲ್ಯಾನ್, ಮಾಜಿ ಅಧ್ಯಕ್ಷ ಧರ್ಮಪಾಲ ರಾವ್ ಕಜೆ, ಮಾಜಿ ಉಪಾಧ್ಯಕ್ಷ ರಮೇಶ್ ಎನ್. ಸಿ., ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಈಶ್ವರ ಗೌಡ ಪಜ್ಜಡ್ಕ, ಪ್ರಶಾಂತ್ ರೈ ಮನವಳಿಕೆ, ಮಾಜಿ ಸಹಾಯಕ ಕಾರ್ಯನಿರ್ವಹಣಾದಿಕಾರಿ ಮುತ್ತಪ್ಪ ಪುಜಾರಿ, ವ್ಯವಸ್ಥಾಪಕ ಆನಂದ ಗೌಡ ಪಜ್ಜಡ್ಕ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ರವಿರಾಜ್ ಶೆಟ್ಟಿ, ಶಾಖಾ ವ್ಯವಸ್ಥಾಪಕರಾದ ಆಶಾಲತಾ, ರಾಧಾಕೃಷ್ಣ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.
    ಸಂಘದ ಉಪಾಧ್ಯಕ್ಷ ದಯಾನಂದ ರೈ ಮನವಳಿಕೆ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೋಹರ ಪ್ರಕಾಶ್ ವಂದಿಸಿದರು. ಶಾಖಾ ವ್ಯವಸ್ಥಾಪಕ ಲೋಕನಾಥ ರೈ ಕೇಲ್ಕ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Alankaru Prathamika Krishi Pattina Sahakara Sangha Apex Bank Haleneranki Putturu Master Planery Ramesh Bhta Uppangala Shashikumar Rai balyottu
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವ
    Next Article ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಾಣ

    Related Posts

    ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಾಣ

    May 29, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವ

    May 29, 2026

    ಎಂಸಿಸಿ ಬ್ಯಾಂಕ್ ಸಂತೆಕಟ್ಟೆ ಶಾಖೆಯ ರೂ. 10 ಕೋಟಿ ವ್ಯವಹಾರ ಸಾಧನೆ ಸಂಭ್ರಮ; ಶಾಲೆಗಳಿಗೆ ಪುಸ್ತಕ ವಿತರಣೆ

    May 28, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಾಣ

    May 29, 2026

    ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅಭಿವೃದ್ಧಿಯಲ್ಲಿ ಜಿಲ್ಲೆ, ರಾಜ್ಯಕ್ಕೆ ಮಾದರಿ

    May 29, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವ

    May 29, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.