ಕುಪ್ಪೆಪದವು: ಮಹಿಳೆಯರು ಸಾಮಾಜಿಕವಾಗಿ ಆರ್ಥಿಕವಾಗಿ ಸಬಲೀಕರಣಗೊಳ್ಳಲು ಸ್ವಸಹಾಯ ಸಂಘಗಳು ಪ್ರಮುಖವಾದ ಪಾತ್ರ ವಹಿಸಿದೆ ಎಂದು ನೇಸರ ಕೇಂದ್ರ ಸಮಿತಿ ಇದರ ಉಪಾಧ್ಯಕ್ಷರಾದ ಅನುಸೂಯ ಕಾಜವ ಕುಪ್ಪೆಪದವು ಹೇಳಿದರು.
https://chat.whatsapp.com/FCEnlTkAKCC0MGPhXtX4i4
ದಕ್ಷಿಣ ಕನ್ನಡ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೇತೃತ್ವದಲ್ಲಿ ಕುಪ್ಪೆಪದವು ರಾಮಕೃಷ್ಣ ಭಜನಾ ಮಂದಿರದಲ್ಲಿ ನಡೆದ ಕುಪ್ಪೆಪದವು ವಲಯದ 20 ಸ್ವಸಹಾಯ ಸಂಘಗಳ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳಿಗೆ ನಡೆದ ತರಬೇತಿ ಶಿಬಿರ ಉದ್ಫಾಟಿಸಿ ಅವರು ಮಾತನಾಡಿದರು.
ಸಹಕಾರಿಯ ನಿರ್ದೇಶಕರಾದ ವಸಂತಿ ಕುಪ್ಪೆಪದವು ಅಧ್ಯಕ್ಷತೆ ವಹಿಸಿದ್ದರು. ಸ್ವಂದನ ಸ್ವಸಹಾಯ ಸಂಘಗಳ ಒಕ್ಕೂಟದ ಕಾರ್ಯದರ್ಶಿ ಸಿಸಿಲಿಯ ಸಲ್ಡಾನ್ಹ ಮುಖ್ಯ ಅತಿಥಿಯಾಗಿದ್ದರು. ಸಹಕಾರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿ ನಡೆಸಿಕೊಟ್ಟರು. ಸಹಕಾರಿಯ ಸಿಬ್ಬಂದಿ ಸುಮಂಗಳ ಕಾರ್ಯಕ್ರಮ ನಿರೂಪಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹರಿಣಾಕ್ಷಿ ವಂದಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com





