ಉಡುಪಿ: ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜು ಬಳಿ ಕಳೆದ ಮೂರು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆಯು ಎಂಜಿಎಂ ಕಾಲೇಜು ಆವರಣದ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು.
https://chat.whatsapp.com/FCEnlTkAKCC0MGPhXtX4i4
ಸೊಸೈಟಿಯ ಅಧ್ಯಕ್ಷೆ ಜೆಸಿಂತಾ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಉಡುಪಿ ವಿಭಾಗದ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಸೊಸೈಟಿಯ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜ, ವಾರ್ಷಿಕ ವರದಿ ಮಂಡಿಸಿದರು. ಗತ ವರ್ಷದಲ್ಲಿ 19 ಕೋಟಿ ರೂ. ವ್ಯವಹಾರ ಆಗಿದ್ದು, ಸೊಸೈಟಿ ಪ್ರಸ್ತುತ 19.50 ಲಕ್ಷ ರೂ. ಲಾಭದಲ್ಲಿದೆ. ಎರಡು ವರ್ಷಗಳ ಬೆಳವಣಿಗೆಯಲ್ಲಿ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಗ್ರಾಹಕರಿಗೆ ಕೃತಜ್ಞತೆ ಸಲ್ಲಿಸಿದರು.
ಕಳೆದ ಮೂರು ವರ್ಷಗಳಲ್ಲಿ ಗ್ರಾಹಕರಿಂದ ಸೊಸೈಟಿಗೆ ಉತ್ತಮ ವ್ಯವಹಾರ ದೊರಕಿದ್ದು, ದಿನೇದಿನೆ ಉತ್ತಮ ಪ್ರಗತಿ ಹೊಂದುತ್ತಿದೆ. ಗೃಹ, ಚಿನ್ನಾಭರಣ ಮತ್ತು ವಾಹನ ಸಾಲ ನೀಡಲಾಗುತ್ತಿದೆ. ಮಾತ್ರವಲ್ಲದೆ ನಿರ್ದೇಶಕರುಗಳ ಸಹಕಾರದೊಂದಿಗೆ ವಿವಿಧ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಉಡುಪಿ ಸಿಂಡಿಕೇಟ್ ಸೌಹಾರ್ದ ಸೊಸೈಟಿ ಮಾಡುತ್ತಿದೆ ಎಂದು ಸೊಸೈಟಿಯ ಉಪಾಧ್ಯಕ್ಷ ಅಜಯ್ ಕುಮಾರ್ ತಿಳಿಸಿದರು.

ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪತ್ರ ಮತ್ತು ಮುಂದಿನ ಯೋಜನೆಗಳನ್ನು ಮಂಡಿಸಲಾಯಿತು. ಸೊಸೈಟಿ ನಿರ್ದೇಶಕರಾದ ಪ್ರಶಾಂತ್ ಕುಮಾರ್, ರೋಹನ್ ಕುಲಾಸೋ, ಜೂಡ್ ನೆಲ್ಸನ್ ಡಿಸೋಜ, ಗುರುಚರಣ್, ಪ್ರತಿಭಾ, ಸೀಮಾ, ಪ್ರಶಾಂತಿ ಪ್ರಿಯ ಕಸ್ತಲಿನೋ, ಅಜಿತ್ ಉಪಸ್ಥಿತರಿದ್ದರು. ಸೊಸೈಟಿಯ ಸಿಬ್ಬಂದಿಗಳು ಪ್ರಾರ್ಥನಾ ಗೀತೆ ಹಾಡಿದರು. ಹಾಜರಾದ ಎಲ್ಲಾ ಸದಸ್ಯರಿಗೂ ಭೋಜನ ವ್ಯವಸ್ಥೆ ಮತ್ತು ನೆನಪಿನ ಕಾಣಿಕೆ ನೀಡಲಾಯಿತು.
ಪ್ರಧಾನ ಶಾಖೆ ವ್ಯವಸ್ಥಾಪಕಿ ಫೆಲ್ಸಿ ಡಿಸೋಜ ಸ್ವಾಗತಿಸಿದರು, ಲೆಕ್ಕ ವ್ಯವಸ್ಥಾಪಕರಾದ ಕುಮಾರ್ ಎಚ್.ಎನ್ ಧನ್ಯವಾದ ಸಮರ್ಪಿಸಿದರು. ನಿರ್ದೇಶಕ ಸ್ಟೀವನ್ ಕುಲಾಸೊ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com




