ಮಂಗಳೂರು: ಶ್ರೀಶಾ ಸೌಹಾರ್ದ ಸೊಸೈಟಿಯ ಪ್ರಾಯೋಜಕತ್ವದಲ್ಲಿ ದಾಸಸಾಹಿತ್ಯ ಸೇವಾ ಪ್ರತಿಷ್ಠಾನವು ಅಧಿಕ ಮಾಸದ ಪರ್ವಕಾಲದಲ್ಲಿ ಭಾನುವಾರ ಸಂಜೆ 6.30ರಿಂದ 8.30ರವರಿಗೆ ನಗರದ ವಿ.ಟಿ.ರಸ್ತೆಯಲ್ಲಿನ ಕೃಷ್ಣ ಮಂದಿರದಲ್ಲಿ ಭಜನ್ ಸಂಧ್ಯಾ ಕಾರ್ಯಕ್ರಮವನ್ನು ಆಯೋಜಿಸಿತ್ತು.
https://chat.whatsapp.com/FCEnlTkAKCC0MGPhXtX4i4
ಮುಂಬೈ ಮೂಲದ ವಿದುಷಿ ಭಾಗ್ಯಶ್ರೀ ದೇಶಪಾಂಡೆಯವರು ಅದ್ಭುತವಾಗಿ ಹಾಡುತ್ತ ಕಿಕ್ಕಿರಿದು ನೆರೆದಿದ್ದ ಶ್ರೋತೃಗಳನ್ನು ಧ್ಯಾನಸ್ಥ ಸ್ಥಿತಿಗೆ ಕೊಂಡೊಯ್ದರು. ಸಂತ ತುಕಾರಾಮರವರ ಕೃತಿಗಳೂ ಸೇರಿದಂತೆ ಅನೇಕ ಸಂತರ ಮರಾಠಿ ಹಾಡುಗಳನ್ನು ಸುಶ್ರಾವ್ಯವಾಗಿ ಹಾಡಿದರು. ಸಹಕಲಾವಿದರಾಗಿ ತಬ್ಲಾದಲ್ಲಿ ರಾಜೇಶ್ ಭಾಗವತ್, ಹಾರ್ಮೋನಿಯನಲ್ಲಿ ಹೇಮಂತ್ ಭಾಗವತ್ ಹಾಗೂ ತಾಳದಲ್ಲಿ ಪಾಂಡುರಂಗ ಭಾಗವತ್ ಸೊಗಸಾಗಿ ಸಾಥ್ ನೀಡಿ ಕಚೇರಿಗೆ ಮೆರಗು ನೀಡಿದರು.
ಶ್ರೀಶಾ ಸೌಹಾರ್ದ ಸೊಸೈಟಿ ಹಾಗೂ ದಾಸಸಾಹಿತ್ಯ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಎಂ. ಎಸ್.ಗುರುರಾಜ್ ಅವರು ಕಾರ್ಯಕ್ರಮದ ಬಗ್ಗೆ ಮಾತನಾಡಿ ಹರಿದಾಸರ, ಸಂತರ ಕೃತಿಗಳು ಜೀವನ ಮೌಲ್ಯಗಳನ್ನು ಪ್ರತಿಪಾದಿಸುತ್ತಾ ಜೀವನ ಮಟ್ಟವನ್ನು ಮೇಲೇರಿಸುತ್ತವೆ. ಈ ಎಂದಿಗಿಂತಲೂ ಇವುಗಳು ಈಗ ಹೆಚ್ಚು ಪ್ರಸ್ತುತವೆನಿಸುತ್ತವೆ. ಆದ್ದರಿಂದ ದಾಸಸಾಹಿತ್ಯ ಸೇವಾ ಪ್ರತಿಷ್ಠಾನವು ಹರಿದಾಸರ ಸಂತರ ಸಂಗೀತದ ಜೊತೆಗೆ ಸಾಹಿತ್ಯವನ್ನೂ ಜನರ ಮನೆ ಮನಗಳಿಗೆ ತಲುಪಿಸುವ ಸದುದ್ದೇಶದಿಂದ ನಿರಂತರವಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.ಈ ಕಾರ್ಯಗಳಿಗೆ ಬೆನ್ನೆಲುಬಾಗಿ ಆರ್ಥಿಕ ನೆರವನ್ನು ಶ್ರೀಶಾ ಸೌಹಾರ್ದ ಸೊಸೈಟಿ ನೀಡುತ್ತಿದೆ ಎಂದು ಹೇಳಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

