ವಿಜಯಪುರ: ವಿಜಯಪುರ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟಕ್ಕೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಬೆಂಗಳೂರು ನಿರ್ದೇಶಕ ಗುರುನಾಥ ಜಾಂತೀಕರ ಶುಕ್ರವಾರ ಭೇಟಿ ನೀಡಿದರು.
https://chat.whatsapp.com/FCEnlTkAKCC0MGPhXtX4i4
ಅವರನ್ನುಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು. ಒಕ್ಕೂಟಕ್ಕೆ ಒಬ್ಬ ಸಹಾಯಕ ನಿಬಂಧಕರನ್ನು ಸಂಯುಕ್ತ ಸಹಕಾರಿಯಿಂದ ನೇಮಕ ಮಾಡಿಕೊಂಡು ಸಾಲ ವಸೂಲಾತಿ ಮಾಡಿಕೊಡಲು ವಿನಂತಿಸಲಾಯಿತು. ಕನಿಷ್ಠ ಒಂದು ತಿಂಗಳಲ್ಲಿ ಎರಡು ದಿನ ಬಂದು ಇಲ್ಲಿಯೇ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಅವಕಾಶ ಮಾಡಿಕೊಡಲು ವಿನಂತಿಸಲಾಯಿತು. ಇದಕ್ಕೆ ಸ್ಪಂದಿಸಿದ ಜಾಂತೀಕರ ಅವರು ಸಂಯುಕ್ತ ಸಹಕಾರಿಯ ಸಭೆಯಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು ಸಭೆಯಲ್ಲಿ ಗುಲ್ಬರ್ಗಾ ಜಿಲ್ಲೆಯ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಎಸ್.ಎಸ್ ಪಾಟೀಲ್ ಅವರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಒಕ್ಕೂಟದ ನಿರ್ದೇಶಕರಾದ ಅರುಣ್ ವಾರದ, ದಿಲೀಪ್ ಶಿಂತ್ರೆ, ಯಮನಪ್ಪ ಸಾತೀಹಾಳ, ಪರಶುರಾಮ ಚಿಂಚಲಿ, ಅರುಣ ಮಠ, ಸಿದ್ದು ಮಲ್ಲಿಕಾರ್ಜುನಮಠ ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

