ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯಿಂದ ವಿಶ್ವ ಯೋಗ ದಿನಾಚರಣೆ
ಮಂಗಳೂರು: ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಭಾನುವಾರ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಅಧ್ಯಕ್ಷರಾದ ಪಿ. ಉಪೇಂದ್ರ ಆಚಾರ್ಯ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಾನವರಲ್ಲಿ ಸಂಪತ್ತಿಗಿಂತ ಆರೋಗ್ಯ ಚೆನ್ನಾಗಿದ್ದರೆ ಏನನ್ನು ಕೂಡ ಸಾಧಿಸಬಹುದು ಎಂದು ತಿಳಿಸಿದರು.
https://chat.whatsapp.com/FCEnlTkAKCC0MGPhXtX4i4
ಯೋಗ ಶಿಕ್ಷಕರಾದ ಸುರೇಂದ್ರ ಆಚಾರ್ಯ ಮಾತನಾಡಿ ದಿನನಿತ್ಯ ಯೋಗಾಭ್ಯಾಸ ಮಾಡುವುದರಿಂದ ಆಗುವ ಪ್ರಯೋಜನಗಳನ್ನು ತಿಳಿಸಿದರು. ಯೋಗ ಗುರು ಗಣೇಶ ಆಚಾರ್ಯ ಯೋಗಾಸನವನ್ನು ಸದಸ್ಯರು ಮತ್ತು ಸಿಬ್ಬಂದಿಯವರಿಗೆ ಕಲಿಸಿದರು. ನವೀನ್ ಕುಮಾರ್ ಮತ್ತು ಸಂಸ್ಥೆಯ ನಿರ್ದೇಶಕರಾದ ವೈ.ವಿ.ವಿಶ್ವಜ್ಞಮೂರ್ತಿ, ವಿ.ಜಯ ಅಚಾರ್, ಶಶಿಕಾಂತ್ ಆಚಾರ್ಯ ಮತ್ತು ಮಲ್ಲಪ್ಪ ಎನ್. ಪತ್ತಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ಯಜ್ಞೇಶ್ವರ ಕೃಷ್ಣಾಪುರ ಸಭಾ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸದಸ್ಯ ಗ್ರಾಹಕರು ಮತ್ತು ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com





