Close Menu
    Top News

    ಕೊಣಾಜೆ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಗೌರವಾಭಿನಂದನೆ

    July 7, 2026

    ಎಐ, ವಿನೂತನ ತಾಂತ್ರಿಕ ಆವಿಷ್ಕಾರಗಳು ಕಲಾವಿದರ ಬೆಳವಣಿಗೆಗೆ ಪೂರಕ; ಮಾರಕವಲ್ಲ

    July 7, 2026

    ಸಹಕಾರಿ ವಲಯಕ್ಕೆ ಸಹಕಾರಿ ವಿಮಾ ಕಂಪನಿ: ಅಮಿತ್‌ ಷಾ ಘೋಷಣೆ

    July 7, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಐ, ವಿನೂತನ ತಾಂತ್ರಿಕ ಆವಿಷ್ಕಾರಗಳು ಕಲಾವಿದರ ಬೆಳವಣಿಗೆಗೆ ಪೂರಕ; ಮಾರಕವಲ್ಲ
    News

    ಎಐ, ವಿನೂತನ ತಾಂತ್ರಿಕ ಆವಿಷ್ಕಾರಗಳು ಕಲಾವಿದರ ಬೆಳವಣಿಗೆಗೆ ಪೂರಕ; ಮಾರಕವಲ್ಲ

    adminBy adminJuly 7, 2026

    ವಿಶ್ವಕರ್ಮ ಕಲಾ ಪರಿಷತ್ ಕಾರ್ಯಾಗಾರದಲ್ಲಿ ನಿವೃತ್ತ ಪ್ರಾಚಾರ್ಯ ಹರೀಶ್‌ ಶೆಟ್ಟಿ ಅಭಿಪ್ರಾಯ

    ಮಂಗಳೂರು: ಇಂದು ಕಲಾವಿದರು, ಕುಶಲಕರ್ಮಿಗಳು, ಶಿಲ್ಪಿಗಳು ಎಐ ಇತ್ಯಾದಿ ವಿನೂತನ ತಂತ್ರಜ್ಞಾನಗಳ ಆಗಮನದಿಂದ ತಮ್ಮ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ. ಆದರೆ ನಿಜವಾದ ಪ್ರತಿಭೆ ಹಾಗೂ ಕೌಶಲ್ಯವುಳ್ಳವರು ಈ ಬಗ್ಗೆ ಆತಂಕ ಪಡಬೇಕಿಲ್ಲ. ಎಐ ಇತ್ಯಾದಿ ಡಿಜಿಟಲ್ ಟೂಲ್‌ಗಳನ್ನು ಬಳಸಿ ಸಮಯ ಹಾಗೂ ಪರಿಕರಗಳ ಬಳಕೆ ಕಡಿಮೆ ಮಾಡಿಕೊಂಡು ಇನ್ನೂ ವ್ಯಾಪಕವಾದ ಮಾರುಕಟ್ಟೆಗೆ ತಮ್ಮ ಕಲಾಕೃತಿಗಳು ತಲುಪುವಂತೆ ಮಾಡಿ ತಮ್ಮಕಾರ್ಯಕ್ಷೇತ್ರವನ್ನು ವಿಸ್ತರಿಸಿಕೊಳ್ಳಬಹುದು ಎಂದು ಖ್ಯಾತ ಸಾಫ್ಟ್‌ವೇರ್ ವಿಕಾಸಕ, ಕೆಪಿಟಿ ಮಂಗಳೂರು ಇದರ ನಿವೃತ್ತ ಪ್ರಾಚಾರ್ಯ ಹರೀಶ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.

    https://chat.whatsapp.com/FCEnlTkAKCC0MGPhXtX4i4
    ವಿಶ್ವಕರ್ಮ ಕಲಾ ಪರಿಷತ್ ಮಂಗಳೂರು, ಎಸ್.ಕೆ.ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿ. ಆಶ್ರಯದಲ್ಲಿ ಕಲಾವಿದರು ಹಾಗೂ ಕುಶಲಕರ್ಮಿಗಳಿಗಾಗಿ ಪಾಲ್ಕೆ ಬಾಬುರಾಯ ಆಚಾರ್ಯ ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಇಂಪ್ಯಾಕ್ಟ್’ – ಹಸ್ತಕೌಶಲದಿಂದ ಹ್ಯಾಶ್‌ಟ್ಯಾಗ್‌ವರೆಗೆ ಡಿಜಿಟಲ್ ಮಾರ್ಕೆಟಿಂಗ್ ಕಾರ್ಯಾಗಾರದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದರು.
    ಅಂತಾರಾಷ್ಟ್ರೀಯ ಚಿತ್ರ ಕಲಾವಿದ, ರುದ್ರ ಹನುಮಾನ್ ಖ್ಯಾತಿಯ ಕರಣ್ ಆಚಾರ್ಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಸಾಮಾಜಿಕ ಮಾಧ್ಯಮವನ್ನು ಕೌಶಲ್ಯಯುಕ್ತವಾಗಿ ಜಾಣ್ಮೆಯಿಂದ ಬಳಸಿಕೊಂಡರೆ ಕಲಾವಿದರು ಹೆಚ್ಚಿನ ಯಶಸ್ಸು ಗಳಿಸಲು ಸಾಧ್ಯ ಎಂದರು.‌ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಸ್‌ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಪಿ.ಉಪೇಂದ್ರ ಆಚಾರ್ಯ ಮಾತನಾಡಿ, ಇಂತಹ ಕಾರ್ಯಾಗಾರಗಳು, ಕಲಾವಿದರು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಬದುಕು ಕಟ್ಟಿಕೊಳ್ಳಲು ಬಹಳ ಅಗತ್ಯ ಎಂದರು.
    ವಿಶ್ವಕರ್ಮ ಕಲಾ ಪರಿಷತ್ ಮಂಗಳೂರು ಇದರ ಅಧ್ಯಕ್ಷರಾದ ಡಾ.ಎಸ್ ಪಿ ಗುರುದಾಸ್ ಸ್ವಾಗತಿಸಿದರು. ಭಜನೆ, ಸುಗಮ ಸಂಗೀತ ಹಾಗೂ ಮದರಂಗಿ ತರಬೇತಿ ತರಗತಿಗಳಿಗೆ ಚಾಲನೆಯ ಪೋಸ್ಟರ್‌ ಅನ್ನು ಬಿಡುಗಡೆಗೊಳಿಸಲಾಯಿತು. ಡಿಜಿಟಲ್ ಮಾರ್ಕೆಟಿಂಗ್ ಕಾರ್ಯಾಗಾರದ ಬಗ್ಗೆ ಪೂಜಾ ಆಚಾರ್ಯ ಮಾಹಿತಿ ನೀಡಿದರು. ಭರತ್ ರಾಜ್ ಬೈಕಾಡಿ ಮತ್ತು ಜೀವನ್ ಆಚಾರ್ಯ ಸಹಕರಿಸಿದರು. ಸಂಗೀತ ನಿರ್ದೇಶಕ ಕೆ.ರವಿಶಂಕರ್ ಹಾಗೂ ಸಂಗೀತ ಶಿಕ್ಷಕರಾದ ರತ್ನಾವತಿ ಜೆ. ಬೈಕಾಡಿ, ಮದರಂಗಿ ಕಲಾ ತರಬೇತಿದಾರರಾದ ಆದ್ವಿಕಾ ಆಚಾರ್ಯರು ಉಪಸ್ಥಿತರಿದ್ದರು. ಕಲಾ ಪರಿಷತ್ ನ ಕಾರ್ಯದರ್ಶಿ ರಮ್ಯಾ ಲಕ್ಷ್ಮೀಶ್ ಪ್ರಾರ್ಥನೆಗೈದರು ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ಯಜ್ಞೇಶ್ವರ ಕೃಷ್ಣಾಪುರ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Dr. S.P Gurudas IMPACT Karan Acharya KPT Ratnavathi J Baikadi Rudra Hanuman SK Goldsmiths Industrial Co Operative Society
    Previous Articleಸಹಕಾರಿ ವಲಯಕ್ಕೆ ಸಹಕಾರಿ ವಿಮಾ ಕಂಪನಿ: ಅಮಿತ್‌ ಷಾ ಘೋಷಣೆ
    Next Article ಕೊಣಾಜೆ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಗೌರವಾಭಿನಂದನೆ

    Related Posts

    ಕೊಣಾಜೆ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಗೌರವಾಭಿನಂದನೆ

    July 7, 2026

    ಸಹಕಾರಿ ವಲಯಕ್ಕೆ ಸಹಕಾರಿ ವಿಮಾ ಕಂಪನಿ: ಅಮಿತ್‌ ಷಾ ಘೋಷಣೆ

    July 7, 2026

    ವಿಶೇಷ ಸಹಕಾರಿ ಸಪ್ತಾಹದ ಪ್ರಯುಕ್ತ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಪ್ಪಿನಂಗಡಿಯಲ್ಲಿ 112ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

    July 5, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಕೊಣಾಜೆ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಗೌರವಾಭಿನಂದನೆ

    July 7, 2026

    ಎಐ, ವಿನೂತನ ತಾಂತ್ರಿಕ ಆವಿಷ್ಕಾರಗಳು ಕಲಾವಿದರ ಬೆಳವಣಿಗೆಗೆ ಪೂರಕ; ಮಾರಕವಲ್ಲ

    July 7, 2026

    ಸಹಕಾರಿ ವಲಯಕ್ಕೆ ಸಹಕಾರಿ ವಿಮಾ ಕಂಪನಿ: ಅಮಿತ್‌ ಷಾ ಘೋಷಣೆ

    July 7, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.