ಮಂಗಳೂರು: ರಾಜ್ಯದ ಪ್ರತಿಷ್ಠಿತ ಕ್ರೆಡಿಟ್ ಸಹಕಾರ ಸಂಸ್ಥೆಗಳಲ್ಲೊಂದಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರ ಮಾಣಿಕ್ಯ ಪ್ರಶಸ್ತಿ ವಿಜೇತ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 2026-27ನೇ ಸಾಲಿನ ವಿತ್ತೀಯ ವರ್ಷದ ಮೊದಲನೇ ತ್ರೈಮಾಸಿಕ ಅವಧಿ ದಿನಾಂಕ 30-06-2026ಕ್ಕೆ ರೂ.721 ಕೋಟಿ ಠೇವಣಿ, ರೂ.641 ಕೋಟಿ ಸಾಲ, ರೂ.1362 ಕೋಟಿ (ಠೇವಣಿ ಮತ್ತು ಸಾಲ) ವ್ಯವಹಾರವನ್ನು ಹೊಂದಿದೆ. 2025ನೇ ಜೂನ್ 30ಕ್ಕೆ ಹೋಲಿಸುವಾಗ ಠೇವಣಾತಿಯಲ್ಲಿ ರೂ.115 ಕೋಟಿ 19% ವೃದ್ಧಿ, ಹೊರಬಾಕಿ ಸಾಲದಲ್ಲಿ ರೂ.120 ಕೋಟಿ ಹೆಚ್ಚಳ 23% ವೃದ್ಧಿಯೊಂದಿಗೆ, ಒಟ್ಟು ವ್ಯವಹಾರದಲ್ಲಿ ರೂ.235 ಕೋಟಿ ವೃದ್ಧಿಯಿಂದ 21% ಹೆಚ್ಚಳ ಸಾಧಿಸಿದೆ.
https://chat.whatsapp.com/FCEnlTkAKCC0MGPhXtX4i4
30-06-2026ಕ್ಕೆ ನಿವ್ವಳ ಲಾಭ ರೂ.3.74 ಕೋಟಿ ದಾಖಲಿಸಿದ್ದು, ಇದು 2025ನೇ ಜೂನ್ 30ಕ್ಕೆ ಹೋಲಿಸುವಾಗ ರೂ.1.10 ಕೋಟಿ ಹೆಚ್ಚಳವಾಗಿ 42% ವೃದ್ಧಿಯಾಗಿರುತ್ತದೆ. ನಿರಂತರ ಡಿವಿಡೆಂಡ್ ನೀಡುತ್ತ ಬಂದಿರುವ ರಾಮಕೃಷ್ಣ ಕ್ರೆಡಿಟ್ ಸೊಸೈಟಿ, 2024-25ನೇ ಸಾಲಿಗೆ ಶೇ.25 ಡಿವಿಡೆಂಡ್ ನೀಡಿದ್ದು, ಕಳೆದ ಏಳು ವರ್ಷಗಳಿಂದ ಗರಿಷ್ಟ 25% ಡಿವಿಡೆಂಡ್ ನೀಡುತ್ತ ಬಂದಿದೆ. ಸಂಘದ ನಿವ್ವಳ ಅನುತ್ಪಾದಕ ಆಸ್ತಿಯು ಕಳೆದ 18 ವರ್ಷಗಳಿಂದ ಶೂನ್ಯ ಪ್ರಮಾಣದಲ್ಲಿದ್ದು, ಸಾಲ ಮರುಪಾವತಿಯು ಉತ್ತಮವಾಗಿರುತ್ತದೆ.
31-03-2017ಕ್ಕೆ ಒಟ್ಟು ವ್ಯವಹಾರದ ಗುರಿ ರೂ.1515 ಕೋಟಿಯಾಗಿದ್ದು, ಅದನ್ನು ತಲುಪಲು ಸರ್ವ ಪ್ರಯತ್ನ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಕೆ. ಜೈರಾಜ್ ಬಿ. ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







