ಮೈಸೂರು: ಇಲ್ಲಿನ ತ್ಯಾಗರಾಜ ರಸ್ತೆ, ಕೆ.ಆರ್.ಮೊಹಲ್ಲಾದಲ್ಲಿರುವ ದಿವ್ಯ ಸಮಾಜ ನಿರ್ಮಾಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ನೇತ್ರ ಚಿಕಿತ್ಸಾ ಶಿಬಿರ ಜುಲೈ 26ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ದಿ ಮೈಸೂರು ಸಿಟಿ ಕೋ-ಆಪರೇಟಿವ್ ಹೌಸಿಂಗ್ ಸೊಸೈಟಿಯ ಸಮುದಾಯ ಭವನದಲ್ಲಿ ನಡೆಯಲಿದೆ.
https://chat.whatsapp.com/FCEnlTkAKCC0MGPhXtX4i4
ಸಂಘದ ಅಧ್ಯಕ್ಷರಾದ ಬಿ.ಎಸ್. ಶ್ರೀನಾಥ್ ಅಧ್ಯಕ್ಷತೆ ವಹಿಸುವರು. ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಕಟಣೆ ತಿಳಿಸಿದೆ.
ವಾರ್ಷಿಕ ಮಹಾಸಭೆಯ ಜೊತೆಗೆ ಎ.ಎಸ್.ಜಿ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ತನಕ ಆಯೋಜಿಸಲಾಗಿದೆ. ಶಿಬಿರದಲ್ಲಿ ಕಂಪ್ಯೂಟರೈಸ್ಡ್ ಕಣ್ಣಿನ ತಪಾಸಣೆ (ಎ.ಆರ್. ಯಂತ್ರ), ದೂರದಷ್ಟಿ ಮತ್ತು ಸಮೀಪ ದೃಷ್ಟಿ ಪರೀಕ್ಷೆಗಳು, ನುರಿತ ಕೌನ್ಸಿಲಿಂಗ್ ತಂಡದಿಂದ ಸಲಹೆ, ಕುಟುಂಬದ ಸದಸ್ಯರಿಗೆ ರೂ. 800 ಮೌಲ್ಯದ ತಪಾಸಣಾ ಕೂಪನ್, ಇ.ಎಸ್.ಐ. ಮತ್ತು ಯಶಸ್ವಿನಿ ಇದ್ದಲ್ಲಿ ಶುಲ್ಕ ರಹಿತ ಆಪರೇಷನ್ ಸೌಲಭ್ಯವಿದೆ.


