ಮಂಗಳೂರು: ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯು (Institute for Study and development of Cooperation) ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿ. ಮಂಗಳೂರು ಸಹಕಾರದಲ್ಲಿ ಹೊರತರುತ್ತಿರುವ ಮೊಗೆದಷ್ಟೂ ಮೊಳೆಯುವ ಮೊಳಹಳ್ಳಿ ಪುಸ್ತಕದ ಬಿಡುಗಡೆ ಸಮಾರಂಭ ಮೊಳಹಳ್ಳಿ ಶಿವರಾಯರ ಜನ್ಮದಿನವಾದ ಆಗಸ್ಟ್ 4ರಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ.
https://chat.whatsapp.com/FCEnlTkAKCC0MGPhXtX4i4
ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಡಾ.ಎಸ್ ಆರ್ ಹರೀಶ್ ಆಚಾರ್ಯ ಅವರ ಮುತುವರ್ಜಿಯಲ್ಲಿ, ಮೊಳಹಳ್ಳಿ ಶಿವರಾಯರ ಕೊಡುಗೆಗಳ ಅಧ್ಯಯನ ಮಾಡಿ ಬರಹಗಾರರಾದ ಅರವಿಂದ ಚೊಕ್ಕಾಡಿಯವರು ಬರೆದ ಮೊಗೆದಷ್ಟೂ ಮೊಳೆಯುವ ಮೊಳಹಳ್ಳಿ ಪುಸ್ತಕವನ್ನು ಆಗಸ್ಟ್ 4ರಂದು ಎಸ್ಸಿಡಿಸಿಸಿ ಬ್ಯಾಂಕಿನಲ್ಲಿ ಬೆಳಗ್ಗೆ 10ಕ್ಕೆ ಎಸ್ಸಿಡಿಸಿಸಿ ಬ್ಯಾಂಕ್ ಮತ್ತು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಸಹಯೋಗದಲ್ಲಿ ಆಯೋಜಿಸಲಿರುವ ದಿ.ಮೊಳಹಳ್ಳಿ ಶಿವರಾವ್ ಅವರ 146ನೇ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಗುವುದು. ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ ದೇವೇಗೌಡ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಪರಿವರ್ತನೆಗೆ ಸಹಕಾರದ ಮಾರ್ಗ ಕಂಡುಕೊಂಡ ಮೊಳಹಳ್ಳಿ ಶಿವರಾಯರ ಕುರಿತ ಪುಸ್ತಕದ ಬಗ್ಗೆ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ ದೇವೇಗೌಡ ಅವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಶುಭಾಶಯ ಕೋರಿ ಪ್ರೋತ್ಸಾಹದ ನುಡಿಗಳನ್ನಾಡಿದ್ದಾರೆ.


