Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳಿಗೆ ‘ಆನ್-ಟ್ಯಾಪ್’ ಪರವಾನಗಿ

    August 5, 2026

    ಆಗಸ್ಟ್‌ 23ರಂದು ನಂದಿನಿ ಪತ್ತಿನ ಸಹಕಾರ ಸಂಘದ ನೂತನ ಕಿನ್ನಿಗೋಳಿ ಶಾಖೆ ಉದ್ಘಾಟನೆ

    August 5, 2026

    ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ 150 ಕೋಟಿ ರೂ. ವ್ಯವಹಾರ; 1.32 ಕೋಟಿ ರೂ. ಲಾಭ

    August 4, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆಗಸ್ಟ್‌ 23ರಂದು ನಂದಿನಿ ಪತ್ತಿನ ಸಹಕಾರ ಸಂಘದ ನೂತನ ಕಿನ್ನಿಗೋಳಿ ಶಾಖೆ ಉದ್ಘಾಟನೆ
    News

    ಆಗಸ್ಟ್‌ 23ರಂದು ನಂದಿನಿ ಪತ್ತಿನ ಸಹಕಾರ ಸಂಘದ ನೂತನ ಕಿನ್ನಿಗೋಳಿ ಶಾಖೆ ಉದ್ಘಾಟನೆ

    adminBy adminAugust 5, 2026

    ಕಟೀಲು: ನಂದಿನಿ ಪತ್ತಿನ ಸಹಕಾರ ಸಂಘ ಕಟೀಲು ಇದರ ನೂತನ ಕಿನ್ನಿಗೋಳಿ ಶಾಖೆಯ ಉದ್ಘಾಟನಾ ಸಮಾರಂಭ ಆಗಸ್ಟ್‌ 23ರಂದು ಭಾನುವಾರ ಬೆಳಗ್ಗೆ 10.30ಕ್ಕೆ ಕಿನ್ನಿಗೋಳಿಯ ಅರೋನ್ ಪ್ಲಾಜಾದಲ್ಲಿ ಉದ್ಘಾಟನೆಗೊಳ್ಳಲಿದೆ.

    https://chat.whatsapp.com/FCEnlTkAKCC0MGPhXtX4i4
    ನಂದಿನಿ ಪತ್ತಿನ ಸಹಕಾರ ಸಂಘ ಕಟೀಲು ಇದರ ಅಧ್ಯಕ್ಷರಾದ ಕೆ.ನೀಲಯ ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆನುವಂಶೀಯ ಮೊಕ್ತೇಸರರು ಹಾಗೂ ಆಡಳಿತ ಮಂಡಳಿಯ ಅಧ್ಯಕ್ಷರಾದ ಸನತ್‌ಕುಮಾ‌ರ್ ಶೆಟ್ಟಿ ಕೊಡೆತ್ತೂರುಗುತ್ತು ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆನುವಂಶಿಕ ಅರ್ಚಕರಾದ ವೇದಮೂರ್ತಿ ಕೆ.ಲಕ್ಷ್ಮೀನಾರಾಯಣ ಆಸ್ರಣ್ಣ ಮತ್ತು ವೇದಮೂರ್ತಿ ಕೆ.ದೇವೀಕುಮಾರ ಆಸ್ರಣ್ಣರು ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಗುರುರಾಜ್ ಮಲ್ಲಿಗೆಯಂಗಡಿ, ಕಿನ್ನಿಗೋಳಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಜೋಸೆಫ್ ಕ್ವಾಡ್ರಸ್, ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿ ಮಂಗಳೂರಿನ ಸಹಕಾರ ಅಭಿವೃದ್ಧಿ ಅಧಿಕಾರಿ ಎಂ.ಶಿವಲಿಂಗಯ್ಯ, ಯಕ್ಷಧ್ರುವ ಪಟ್ಲ ಫೌಂಡೇಶನ್, ಕಿನ್ನಿಗೋಳಿ ಘಟಕದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಕೊಡೆತ್ತೂರು ಶ್ರೀ ಅರಸು ಕುಂಜರಾಯ ದೈವಸ್ಥಾನ ಟ್ರಸ್ಟ್ ಆಡಳಿತ ಮಂಡಳಿಯ ಅಧ್ಯಕ್ಷ ದೇವಿಪ್ರಸಾದ್‌ ಶೆಟ್ಟಿ ಕೊಡೆತ್ತೂರು ಹೊಸಮನೆ, ಶ್ರೀ ಕೊಂಡೆಲ್ತಾಯ ದೈವಸ್ಥಾನ ಟ್ರಸ್ಟ್ ಅಧ್ಯಕ್ಷರಾದ ಲೋಕಯ್ಯ ಸಾಲಿಯಾನ್‌, ಕಿನ್ನಿಗೋಳಿ ಪಟ್ಟಣ ಪಂಚಾಯತ್ ಕೌನ್ಸಿಲರ್‌ ಸಂತಾನ್ ಡಿಸೋಜ, ಪರಿವರ್ತನಾ ಗ್ರಾಮೀಣ ಸಹಕಾರ ಸಂಘ ಬಜ್ಪೆ ಇದರ ಅಧ್ಯಕ್ಷ ಕೃಷ್ಣಾನಂದ ಡಿ. ಭಾಗವಹಿಸಲಿದ್ದಾರೆ.
    ನಂದಿನಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ಬಬಿತಾ ಎಂ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ ಶೆಟ್ಟಿ ಕೆರಮ, ಶಾಖಾ ವ್ಯವಸ್ಥಾಪಕ ರಾಜೇಶ್‌ ಕುಲಾಲ್‌, ನಿರ್ದೇಶಕರಾದ ಸೀತಾರಾಮ ಬಂಗೇರ, ಅಮರಪ್ರಸಾದ್ ಶೆಟ್ಟಿ, ಲಕ್ಷ್ಮಣ ಶೆಟ್ಟಿ ಸಾಂತ್ಯ, ಹರಿಶ್ಚಂದ್ರ ಶೆಟ್ಟಿ, ಗಣೇಶ್ ಶೆಟ್ಟಿ ಮಿತ್ತಬೈಲುಗುತ್ತು, ಪ್ರೇಮರಾಜ್ ಶೆಟ್ಟಿ, ಜಯ ಡಿ. ಪೂಜಾರಿ, ಗಣೇಶ್ ಆಚಾರ್ಯ, ರುಕ್ಕಯ, ವೈಲೆಟ್ ಡಿಸೋಜ, ಬಿ.ಲತಾ, ಅನಿತಾ ಶೆಟ್ಟಿ, ರತ್ನಾ, ಬ್ಯಾಂಕಿನ ಸಿಬ್ಬಂದಿಗಳು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    Cooperative Cooperative Registrar K Neelaya Kotyan Kateelu Shree Durgaparameshwari Temple Kinnigoli Aron Plaza Nandini Pattina Sahakara Sangha Kateelu Sanath Kumar kodetturuguttu
    Previous Articleಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ 150 ಕೋಟಿ ರೂ. ವ್ಯವಹಾರ; 1.32 ಕೋಟಿ ರೂ. ಲಾಭ
    Next Article ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳಿಗೆ ‘ಆನ್-ಟ್ಯಾಪ್’ ಪರವಾನಗಿ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳಿಗೆ ‘ಆನ್-ಟ್ಯಾಪ್’ ಪರವಾನಗಿ

    August 5, 2026

    ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ 150 ಕೋಟಿ ರೂ. ವ್ಯವಹಾರ; 1.32 ಕೋಟಿ ರೂ. ಲಾಭ

    August 4, 2026

    ಮೊಗೆದಷ್ಟೂ ಮೊಳೆಯುವ ಮೊಳಹಳ್ಳಿ ಆಕರ ಗ್ರಂಥ ಬಿಡುಗಡೆ

    August 4, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳಿಗೆ ‘ಆನ್-ಟ್ಯಾಪ್’ ಪರವಾನಗಿ

    August 5, 2026

    ಆಗಸ್ಟ್‌ 23ರಂದು ನಂದಿನಿ ಪತ್ತಿನ ಸಹಕಾರ ಸಂಘದ ನೂತನ ಕಿನ್ನಿಗೋಳಿ ಶಾಖೆ ಉದ್ಘಾಟನೆ

    August 5, 2026

    ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ 150 ಕೋಟಿ ರೂ. ವ್ಯವಹಾರ; 1.32 ಕೋಟಿ ರೂ. ಲಾಭ

    August 4, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.