ಮಂಗಳೂರು: ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಶಕ್ತಿನಗರದ ನಾಲ್ಯಪದವು ಪಿಎಂಶ್ರೀ ಕೆಪಿಎಸ್ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆ ನೀಡಲಾಯಿತು.
https://chat.whatsapp.com/FCEnlTkAKCC0MGPhXtX4i4
ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಗಣೇಶ ಶೆಣೈಯವರು ಶಾಲೆಗೆ ಅಕ್ವಾಗಾರ್ಡ್ ಅನ್ನು ಸಮರ್ಪಿಸಿದರು. ಈ ಸಂದರ್ಭದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಡಾ.ಪ್ರಶಾಂತ್ ಕೆ.ಎಸ್, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪದವು ಫ್ರೆಂಡ್ಸ್ ಕ್ಲಬ್ ಇದರ ಅಧ್ಯಕ್ಷರಾದ ಕುಶಲ್ ಕುಮಾರ್, ಸಂಚಾಲಕರಾದ ಅಶೋಕ್ ನಾಯಕ್ ಮತ್ತು ಸಹಕಾರಿ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


