Close Menu
    Top News

    ಆಗಸ್ಟ್ 9ರಂದು ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯಿಂದ ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ

    August 7, 2026

    ಗ್ರಾಮೀಣ ಸಹಕಾರಿ ಬ್ಯಾಂಕ್‌ಗಳ ಸಾಲ ನಿಯಮಗಳಿನ್ನು ಮತ್ತಷ್ಟು ಬಿಗಿ

    August 7, 2026

    ನಾಳೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ದೇರಳಕಟ್ಟೆ ಶಾಖೆಯ ಗ್ರಾಹಕರ ಸಮ್ಮಿಲನ

    August 7, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನೀರುಮಾರ್ಗದಲ್ಲಿ ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ಶಿಬಿರ
    News

    ನೀರುಮಾರ್ಗದಲ್ಲಿ ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ಶಿಬಿರ

    adminBy adminAugust 7, 2026

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರ ಆಗಸ್ಟ್‌ ೮ರಂದು ಶನಿವಾರ ಬೆಳಗ್ಗೆ ೯.೩೦ರಿಂದ ಮಧ್ಯಾಹ್ನ ೧೨.೩೦ರವರೆಗೆ ಸುಬ್ರಹ್ಮಣ್ಯ ಭಜನಾ ಮಂಡಳಿ ಸಭಾಭವನ ನೀರುಮಾರ್ಗ ಇಲ್ಲಿ ಆಯೋಜಿಸಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಈ ವೈದ್ಯಕೀಯ ಶಿಬಿರದಲ್ಲಿ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ ಮಂಗಳೂರು ಇವರ ನುರಿತ ತಜ್ಞ ವೈದ್ಯರ ತಂಡದವರಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಮಧುಮೇಹ ತಪಾಸಣೆ, ಬಿ.ಪಿ ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಅನಾರೋಗ್ಯಕರ ಹಲ್ಲುಗಳನ್ನು ಕೀಳುವುದು, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಹಲ್ಲುಗಳನ್ನು ಸ್ವಚ್ಛಗೊಳಿಸುವುದು, ಹೆಚ್ಚಿನ ಚಿಕಿತ್ಸೆಗಾಗಿ ಹಸಿರು ಕಾರ್ಡನ್ನು ನೀಡಲಾಗುವುದು. ಇತರೆ ವೈದ್ಯಕೀಯ ಸೇವೆಗಳು ಕೂಡ ಲಭ್ಯವಿರುತ್ತದೆ. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು. ಇದು ಸಂಘದ ವತಿಯಿಂದ ಜರುಗುವ ೧೧೩ನೇ ಉಚಿತ ವೈದ್ಯಕೀಯ ಶಿಬಿರವಾಗಿದ್ದು, ಈ ಶಿಬಿರವನ್ನು ಲಯನ್ಸ್ ಕ್ಲಬ್, ಮಂಗಳೂರು ಆದಿತ್ಯ, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ ಸುಬ್ರಹ್ಮಣ್ಯ ನಗರ ನೀರುಮಾರ್ಗ, ಇವರುಗಳ ಜಂಟಿ ಸಹಯೋಗದೊಂದಿಗೆ ಆಯೋಜಿಸಲಾಗಿದೆ. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗ ಪಡೆಯದುಕೊಳ್ಳಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Athmashakthi Vividhoddesha Sahakara Sangha Brahmashree Narayana Guru Billava Seva Sangha Subrahmanya Nagara Lions Club Mangaluru Aditya Neerumarga Shree Subrahmanya Bhajana Mandia
    Previous Articleನಿರ್ದೇಶಕರ ಅಧಿಕಾರಾವಧಿ ಕೇಸು ವಿಚಾರಣೆ ಮತ್ತೆ ಮುಂದೂಡಿಕೆ: ಆಗಸ್ಟ್ 14ಕ್ಕೆ ದಿನಾಂಕ ನಿಗದಿ
    Next Article ನಾಳೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ದೇರಳಕಟ್ಟೆ ಶಾಖೆಯ ಗ್ರಾಹಕರ ಸಮ್ಮಿಲನ

    Related Posts

    ಆಗಸ್ಟ್ 9ರಂದು ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯಿಂದ ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ

    August 7, 2026

    ಗ್ರಾಮೀಣ ಸಹಕಾರಿ ಬ್ಯಾಂಕ್‌ಗಳ ಸಾಲ ನಿಯಮಗಳಿನ್ನು ಮತ್ತಷ್ಟು ಬಿಗಿ

    August 7, 2026

    ನಾಳೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ದೇರಳಕಟ್ಟೆ ಶಾಖೆಯ ಗ್ರಾಹಕರ ಸಮ್ಮಿಲನ

    August 7, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಆಗಸ್ಟ್ 9ರಂದು ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯಿಂದ ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ

    August 7, 2026

    ಗ್ರಾಮೀಣ ಸಹಕಾರಿ ಬ್ಯಾಂಕ್‌ಗಳ ಸಾಲ ನಿಯಮಗಳಿನ್ನು ಮತ್ತಷ್ಟು ಬಿಗಿ

    August 7, 2026

    ನಾಳೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ದೇರಳಕಟ್ಟೆ ಶಾಖೆಯ ಗ್ರಾಹಕರ ಸಮ್ಮಿಲನ

    August 7, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.