ಮಂಗಳೂರು: ಇಲ್ಲಿನ ದ.ಕ. ಕೇಂದ್ರ ಸಹಕಾರ ಸಗಟು ಮಾರಾಟ ಸಂಘಕ್ಕೆ (ಜನತಾ ಬಜಾರ್) ಎಸ್ಸಿಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು.
https://chat.whatsapp.com/FCEnlTkAKCC0MGPhXtX4i4
ಸಂಘವು ಮಾಡಿರುವ ಸಾಧನೆಯನ್ನು ಪುರಸ್ಕರಿಸಿ ಈ ಪ್ರಶಸ್ತಿ ನೀಡಲಾಯಿತು. ಶನಿವಾರ ಎಸ್ಸಿಡಿಸಿಸಿ ಬ್ಯಾಂಕ್ನಲ್ಲಿ ನಡೆದ ಸಮಾರಂಭದಲ್ಲಿ ಸಹಕಾರ ರತ್ನ ಡಾ.ಎಂ ಎನ್ ರಾಜೇಂದ್ರ ಕುಮಾರ್ ಅವರು, ಜನತಾ ಬಜಾರ್ ಅಧ್ಯಕ್ಷರಾದ ಪ್ರಸನ್ನ ಕೆ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ನಳಿನಿ ಅವರಿಗೆ ಪುರಸ್ಕಾರ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಜನತಾ ಬಜಾರ್ ಉಪಾಧ್ಯಕ್ಷರಾದ ಮದಲಾಕ್ಷಿ ರೈ, ನಿರ್ದೇಶಕರಾದ ಪಕೀರಪ್ಪ, ಜನಾರ್ದನ ಬಿ, ಸುಜಯ ಅಶೋಕ್, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕರಾದ ಎಚ್.ಎನ್ ರಮೇಶ್, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು ಮೊದಲಾದವರು ಹಾಜರಿದ್ದರು.










