ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ ಬ್ಯಾಂಕ್) ವತಿಯಿಂದ 15ನೇ ಬಾರಿ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ಲಭಿಸಿದೆ.
https://chat.whatsapp.com/FCEnlTkAKCC0MGPhXtX4i4
ಶನಿವಾರ ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅವರು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಎನ್. ಮನ್ಮಥ, ಎಸ್.ಬಿ. ಜಯರಾಮ ರೈ, ಕುಶಾಲಪ್ಪ ಗೌಡ ಪೂವಾಜೆ, ಸಹಕಾರ ಸಂಘಗಳ ಉಪನಿಬಂಧಕ ರಮೇಶ್, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು, ನಿರ್ದೇಶಕರಾದ ಉದಯ ರೈ ಮಾದೋಡಿ ಹಾಗೂ ಪ್ರಕಾಶ್ ರೈ ಸಾರಕರೆ ಉಪಸ್ಥಿತರಿದ್ದರು.
ಸಂಘದ ನಿರಂತರ ಸಾಧನೆ, ಉತ್ತಮ ಆಡಳಿತ ಹಾಗೂ ಸದಸ್ಯರು ಮತ್ತು ಸಿಬ್ಬಂದಿಯ ಸಹಕಾರಕ್ಕೆ ದೊರೆತಿರುವ ಈ ಪ್ರಶಸ್ತಿ ಸವಣೂರು ಸಹಕಾರ ಕ್ಷೇತ್ರದ ಮತ್ತೊಂದು ಮಹತ್ವದ ಗೌರವವಾಗಿದೆ.



